38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಕೊಕ್ಕಡ ವಲಯ ಮಟ್ಟದ ಬಾಲಕ ಮತ್ತು ಬಾಲಿಕೆಯರ ತ್ರೋಬಾಲ್ ಪಂದ್ಯಾಟ ಜರಗಿತು.

ಪಂದ್ಯಾಟವನ್ನು ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ್ ಗೌಡ ಕೊಲ್ಲಿಮಾರ್ ರವರು ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ದ ಕ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಾಲೆಯ ಮುಖ್ಯೋಪಾಧ್ಯಾಯರನ್ನು ಕೊಕ್ಕಡ ವಲಯದ ಶಾರೀರಿಕ ಶಿಕ್ಷಣ ಶಿಕ್ಷಕರ ವತಿಯಿಂದ ಸನ್ಮಾನಿಸಲಾಯಿತು.

ಶಿಕ್ಷಕಿ ರಾಜಶ್ರೀಯರವರು ಸ್ವಾಗತಿಸಿ, ರವಿಚಂದ್ರ ರವರು ಧನ್ಯವಾದ ಸಲ್ಲಿಸಿದರು. ಶಾರೀರಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರವರು ಕ್ರೀಡಾಕೂಟವನ್ನು ಸಂಯೋಜಿಸಿದರು. ಸುಮನ್ ರವರು ಕಾರ್ಯಕ್ರಮ ನಿರೂಪಿಸಿದರು.

ಪಂದ್ಯಾಟದಲ್ಲಿ ಒಟ್ಟು ಹದಿನೇಳು ತಂಡಗಳು ಭಾಗವಹಿಸಿದ್ದವು. ಪ್ರಥಮ ಸ್ಥಾನ ಪಡೆದ ಬದನಾಜೆ ಪ್ರೌಢಶಾಲೆ ಮತ್ತು ದ್ವಿತೀಯ ಸ್ಥಾನ ಪಡೆದ ಬೆಳಾಲು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ತಂಡದವರು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾದರು. ಶೇಖರ್ ಕೊಲ್ಲಿಮಾರ್ ರವರು ಬಹುಮಾನ ವಿತರಿಸಿದರು. ನಾವುರ ಪ್ರೌಢಶಾಲೆಯ ಅಶೋಕ್ ಕುಮಾರ್ ಉಜಿರೆಯವರು ವಿಜೇತ ತಂಡದ ವಿವರವನ್ನು ಪ್ರಕಟಿಸಿದರು.

Related posts

ಪದ್ಮುಂಜ ಹಾ.ಉ.ಸ‌. ಸಂಘದ ಮಾಜಿ ನಿರ್ದೇಶಕ ಪೂವನಿ ಗೌಡ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಪ್ರತಿಷ್ಠಿತ ಸಿ.ಎಸ್.ಐ.ಆರ್ ನಿರ್ದೇಶಕ ಹುದ್ದೆಗೆ ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ನೇಮಕಾತಿ

Suddi Udaya

ಅಳದಂಗಡಿಯ ವಿಲ್ಮಾ ಲವೀನಾ ಡಿಸೋಜಾ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಫ್ಯಾನ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya
error: Content is protected !!