24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

ಲಾಯಿಲ : ಮಾನವ ರೂಪದ ದೇವರು ಶಕ್ತಿಯಾಗಿರುವ ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನ ಶಸ್ತ್ರಜ್ಞನಾಗಿದ್ದಾನೆ. ಶ್ರೀಕೃಷ್ಣನ ಬಾಲ ಲೀಲೆಗಳು ಮಕ್ಕಳ ಮೂಲಕ ಕಂಡಾಗ ಈ ವಿಚಾರಧಾರೆಗಳು ಇಂದಿಗೆ ಪ್ರಸ್ತುತವಾಗಿದೆ. ಸನಾತನ ಧರ್ಮ ನಿರಂತರವಾಗಿರುವುದರಿಂದ. ಯಾರು ಅವಾ ಹೇಳನ ಮಾಡಿದ ಮಾತ್ರಕ್ಕೆ ಧರ್ಮಗಳು ಸಾಯುವುದಿಲ್ಲ. ಧರ್ಮವನ್ನು ವಿರೋಧಿಸಲು ಯಾರಿಂದಲೂ ಸಾಧ್ಯವಿಲ್ಲ. ಸನಾತನ ಧರ್ಮ ಶಾಶ್ವತವಾಗಿರುತ್ತದೆ ಎಂದು ಕರ್ನಾಟಕ ಸರಕಾರ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಹೇಳಿದರು.


ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವದ ಸಮಾರೋಪದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.


ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷರಾದ ಶಶಿಕುಮಾರ್ ಅಯೋಧ್ಯ ನಗರ ವಹಿಸಿದರು. ಮುಖ್ಯ ಅತಿಥಿಗಳಾಗಿ ಉಜಿರೆ ಬೆನಕ ಹೆಲ್ತ್ ಸೆಂಟರ್ ಎಂ.ಡಿ ಡಾ.ಗೋಪಾಲಕೃಷ್ಣ ಭಟ್, ಸಾಯಿ ರಾಮ್ ಗ್ರೂಪ್ ಶಶಿಧರ ಶೆಟ್ಟಿ ಗುರುವಾಯನಕೆರೆ, ಇಂಡಿಯನ್ ಅರ್ಥ್ ಮೂವರ್ಸ್ ಲಕ್ಷ್ಮಣ ಸಪಲ್ಯ ಉಜಿರೆ, ಸಮಿತಿಯ ಗೌರವಾಧ್ಯಕ್ಷರಾದ ಪ್ರಕಾಶ್ ಕಾಶಿಬೆಟ್ಟು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಮುದ್ದುಕೃಷ್ಣ. ಬಾಲಕೃಷ್ಣ ವೇಷ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧೆಗಳ ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಿದರು.


ಸೇವಾ ಯೋಜನೆ ಅಂಗವಾಗಿ ಇಬ್ಬರಿಗೆ ವೈದ್ಯಕೀಯ ನೆರವು ನೀಡಲಾಯಿತು. ಸ್ಪರ್ಧೆಗಳನ್ನು ಆಯೋಜಿಸಿದ ದೈಹಿಕ ಶಿಕ್ಷಕರಾದ ಜಯರಾಜ್ ಜೈನ್ ಇವರನ್ನು ಗೌರವಿಸಲಾಯಿತು. ಸಾಂಸ್ಕೃತಿಕ ಕಾರ್ಯದರ್ಶಿ ಅರವಿಂದ ಶೆಟ್ಟಿ ನಿರೂಪಿಸಿ. ಕಾರ್ಯದರ್ಶಿ ಗಣೇಶ್ ಸ್ವಾಗತಿಸಿ, ಜಗದೀಶ್ ಕನ್ನಾಜೆ ವ0ದಿಸಿದರು. ನಂತರ ಅವು ದಾಲಾಪುಜಿ ಎಂಬ ತುಳು ನಾಟಕ ಪ್ರದರ್ಶನಗೊಂಡಿತು.


ವರದಿ: ಉದಯ ಲಾಯಿಲ

Related posts

ವಿಧಾನ ಸಭಾ ಚುನಾವಣೆ : ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ಅಂತರರಾಷ್ಟ್ರೀಯ ‘ಗ್ರೀನ್‌ ಆಸ್ಕರ್‌’ ಸೆಲ್ಕೋ ಮಡಿಲಿಗೆ ಹಸಿರು ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಸಂದ ದೊಡ್ಡ ಗೌರವ; ಗ್ರಾಮೀಣ ನಾವೀನ್ಯತೆಗಾಗಿ ಸೆಲ್ಕೊ ಸೋಲಾರ್‌ ಲೈಟ್‌ ಪ್ರೈವೇಟ್‌ ಲಿಮಿಟೆಡ್‌ಗೆ ಆಶ್ಡೆನ್ ಪ್ರಶಸ್ತಿ –2025

Suddi Udaya
error: Content is protected !!