23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಬೆಳ್ತಂಗಡಿ: ಹಾಲು ಉತ್ಪಾದಕ ಒಕ್ಕೂಟದ ಮೂಲಕ ಸದಸ್ಯರಿಗೆ ಅನೇಕ ಅನುಕೂಲತೆಗಳನ್ನು ಕಲ್ಪಿಸಲಾಗಿದ್ದು ಅದರ ಪ್ರಯೋಜನ ಪಡೆದು, ಗುಣಮಟ್ಟದ ಹಾಲು ಪೂರೈಕೆಯಾಗುವತ್ತ ಗಮನಹರಿಸಬೇಕು ಎಂದು ದ.ಕ.ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಸುಚಿತ್ರಾ ಹೇಳಿದರು.
ಅವರು ಸೆ.12 ರಂದು ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಒಕ್ಕೂಟದ ಮಿನಿ ಡೈರಿ, ನಂದಿನಿ ಸಮೃದ್ಧಿ, ಹೆಣ್ಣುಕರು ಸಾಕಾಣೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.


ವರದಿ ಸಾಲಿನಲ್ಲಿ ರೂ. 79,63,897 ಮೊತ್ತದ ಹಾಲನ್ನು ಸಂಗ್ರಹಿಸಲಾಗಿದ್ದು ರೂ.83,39,248 ಮೊತ್ತದಲ್ಲಿ ಒಕ್ಕೂಟಕ್ಕೆ ಹಾಗೂ ಸ್ಥಳೀಯವಾಗಿ ಮಾರಾಟ ಮಾಡಲಾಗಿದೆ. ರೂ.1,45,326 ರಷ್ಟು ಲಾಭ ಬಂದಿರುವುದನ್ನು ಸಭೆಯಲ್ಲಿ ತಿಳಿಸಲಾಯಿತು.


ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ನಿರಂಜನ ಜೋಶಿ ಅವರು ಹಾಲು ಸಂಗ್ರಹ ಹೆಚ್ಚಾಗುವಂತೆ ಎಲ್ಲರೂ ಶ್ರಮಿಸುವಂತೆ ವಿನಂತಿಸಿದರು.
ಹೆಚ್ಚು ಹಾಲು ಪೂರೈಸುತ್ತಿರುವ ಬೇಬಿ ಪೂಜಾರಿ, ರವಿ ಪೂಜಾರಿ, ಹರೀಶ್ ಮಡಿವಾಳ ಅವರಿಗೆ ಬಹುಮಾನ ನೀಡಲಾಯಿತು. ಸದಸ್ಯರ ಪ್ರತಿಭಾನ್ವಿತ ಮಕ್ಕಳನ್ನು ಅಭಿನಂದಿಸಲಾಯಿತು.


ಸಂಘದ ನಿರ್ದೇಶಕರುಗಳಾದ ಮೋಹನ ಹೆಗ್ಡೆ, ಹರೀಶ್ ಪೂಜಾರಿ, ಪ್ರಮೋದ ಪೂಜಾರಿ, ಜಗನ್ನಾಥ, ಆನಂದ ಪೂಜಾರಿ, ಸುಶೀಲಾ, ರೀಟಾ ಡಿ ಸೋಜ, ಆನಂದ ಪ್ರಕಾಶ ಕುಟಿನ್ಹಾ, ಹರೀಶ್ ಮಡಿವಾಳ, ಹಾಲು ಪರೀಕ್ಷಕಿ ಸುಜಾತಾ ಇದ್ದರು.
ಕಾರ್ಯನಿರ್ವಹಣಾಧಿಕಾರಿ ಚೈತ್ರಾ ಸ್ವಾಗತಿಸಿ, ವರದಿ ಮಂಡಿಸಿದರು. ಉಪಾಧ್ಯಕ್ಷೆ ವನಿತಾ ವಂದಿಸಿದರು.

Related posts

ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿಯ ಬ್ರಹ್ಮಕಲಶೋತ್ಸವ: ಮಾ.2ರಂದು ಹೊರೆಕಾಣಿಕೆಯಲ್ಲಿ ಲಾಯಿಲದಿಂದ “ಒಂದು ಸಾವಿರ” ತೆಂಗಿನಕಾಯಿ, ಸಮರ್ಪಣೆ; ಬಿ.ಕೆ ಧನಂಜಯ್ ರಾವ್

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನ ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya
error: Content is protected !!