30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಬೆಳ್ತಂಗಡಿ: ಹಾಲು ಉತ್ಪಾದಕ ಒಕ್ಕೂಟದ ಮೂಲಕ ಸದಸ್ಯರಿಗೆ ಅನೇಕ ಅನುಕೂಲತೆಗಳನ್ನು ಕಲ್ಪಿಸಲಾಗಿದ್ದು ಅದರ ಪ್ರಯೋಜನ ಪಡೆದು, ಗುಣಮಟ್ಟದ ಹಾಲು ಪೂರೈಕೆಯಾಗುವತ್ತ ಗಮನಹರಿಸಬೇಕು ಎಂದು ದ.ಕ.ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಸುಚಿತ್ರಾ ಹೇಳಿದರು.
ಅವರು ಸೆ.12 ರಂದು ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಒಕ್ಕೂಟದ ಮಿನಿ ಡೈರಿ, ನಂದಿನಿ ಸಮೃದ್ಧಿ, ಹೆಣ್ಣುಕರು ಸಾಕಾಣೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.


ವರದಿ ಸಾಲಿನಲ್ಲಿ ರೂ. 79,63,897 ಮೊತ್ತದ ಹಾಲನ್ನು ಸಂಗ್ರಹಿಸಲಾಗಿದ್ದು ರೂ.83,39,248 ಮೊತ್ತದಲ್ಲಿ ಒಕ್ಕೂಟಕ್ಕೆ ಹಾಗೂ ಸ್ಥಳೀಯವಾಗಿ ಮಾರಾಟ ಮಾಡಲಾಗಿದೆ. ರೂ.1,45,326 ರಷ್ಟು ಲಾಭ ಬಂದಿರುವುದನ್ನು ಸಭೆಯಲ್ಲಿ ತಿಳಿಸಲಾಯಿತು.


ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ನಿರಂಜನ ಜೋಶಿ ಅವರು ಹಾಲು ಸಂಗ್ರಹ ಹೆಚ್ಚಾಗುವಂತೆ ಎಲ್ಲರೂ ಶ್ರಮಿಸುವಂತೆ ವಿನಂತಿಸಿದರು.
ಹೆಚ್ಚು ಹಾಲು ಪೂರೈಸುತ್ತಿರುವ ಬೇಬಿ ಪೂಜಾರಿ, ರವಿ ಪೂಜಾರಿ, ಹರೀಶ್ ಮಡಿವಾಳ ಅವರಿಗೆ ಬಹುಮಾನ ನೀಡಲಾಯಿತು. ಸದಸ್ಯರ ಪ್ರತಿಭಾನ್ವಿತ ಮಕ್ಕಳನ್ನು ಅಭಿನಂದಿಸಲಾಯಿತು.


ಸಂಘದ ನಿರ್ದೇಶಕರುಗಳಾದ ಮೋಹನ ಹೆಗ್ಡೆ, ಹರೀಶ್ ಪೂಜಾರಿ, ಪ್ರಮೋದ ಪೂಜಾರಿ, ಜಗನ್ನಾಥ, ಆನಂದ ಪೂಜಾರಿ, ಸುಶೀಲಾ, ರೀಟಾ ಡಿ ಸೋಜ, ಆನಂದ ಪ್ರಕಾಶ ಕುಟಿನ್ಹಾ, ಹರೀಶ್ ಮಡಿವಾಳ, ಹಾಲು ಪರೀಕ್ಷಕಿ ಸುಜಾತಾ ಇದ್ದರು.
ಕಾರ್ಯನಿರ್ವಹಣಾಧಿಕಾರಿ ಚೈತ್ರಾ ಸ್ವಾಗತಿಸಿ, ವರದಿ ಮಂಡಿಸಿದರು. ಉಪಾಧ್ಯಕ್ಷೆ ವನಿತಾ ವಂದಿಸಿದರು.

Related posts

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಮ್ಯಾನೇಜ್ ಮೆಂಟ್ ಫೆಸ್ಟ್ ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!