April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಬೆಳ್ತಂಗಡಿ: ಹಾಲು ಉತ್ಪಾದಕ ಒಕ್ಕೂಟದ ಮೂಲಕ ಸದಸ್ಯರಿಗೆ ಅನೇಕ ಅನುಕೂಲತೆಗಳನ್ನು ಕಲ್ಪಿಸಲಾಗಿದ್ದು ಅದರ ಪ್ರಯೋಜನ ಪಡೆದು, ಗುಣಮಟ್ಟದ ಹಾಲು ಪೂರೈಕೆಯಾಗುವತ್ತ ಗಮನಹರಿಸಬೇಕು ಎಂದು ದ.ಕ.ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಸುಚಿತ್ರಾ ಹೇಳಿದರು.
ಅವರು ಸೆ.12 ರಂದು ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಒಕ್ಕೂಟದ ಮಿನಿ ಡೈರಿ, ನಂದಿನಿ ಸಮೃದ್ಧಿ, ಹೆಣ್ಣುಕರು ಸಾಕಾಣೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.


ವರದಿ ಸಾಲಿನಲ್ಲಿ ರೂ. 79,63,897 ಮೊತ್ತದ ಹಾಲನ್ನು ಸಂಗ್ರಹಿಸಲಾಗಿದ್ದು ರೂ.83,39,248 ಮೊತ್ತದಲ್ಲಿ ಒಕ್ಕೂಟಕ್ಕೆ ಹಾಗೂ ಸ್ಥಳೀಯವಾಗಿ ಮಾರಾಟ ಮಾಡಲಾಗಿದೆ. ರೂ.1,45,326 ರಷ್ಟು ಲಾಭ ಬಂದಿರುವುದನ್ನು ಸಭೆಯಲ್ಲಿ ತಿಳಿಸಲಾಯಿತು.


ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ನಿರಂಜನ ಜೋಶಿ ಅವರು ಹಾಲು ಸಂಗ್ರಹ ಹೆಚ್ಚಾಗುವಂತೆ ಎಲ್ಲರೂ ಶ್ರಮಿಸುವಂತೆ ವಿನಂತಿಸಿದರು.
ಹೆಚ್ಚು ಹಾಲು ಪೂರೈಸುತ್ತಿರುವ ಬೇಬಿ ಪೂಜಾರಿ, ರವಿ ಪೂಜಾರಿ, ಹರೀಶ್ ಮಡಿವಾಳ ಅವರಿಗೆ ಬಹುಮಾನ ನೀಡಲಾಯಿತು. ಸದಸ್ಯರ ಪ್ರತಿಭಾನ್ವಿತ ಮಕ್ಕಳನ್ನು ಅಭಿನಂದಿಸಲಾಯಿತು.


ಸಂಘದ ನಿರ್ದೇಶಕರುಗಳಾದ ಮೋಹನ ಹೆಗ್ಡೆ, ಹರೀಶ್ ಪೂಜಾರಿ, ಪ್ರಮೋದ ಪೂಜಾರಿ, ಜಗನ್ನಾಥ, ಆನಂದ ಪೂಜಾರಿ, ಸುಶೀಲಾ, ರೀಟಾ ಡಿ ಸೋಜ, ಆನಂದ ಪ್ರಕಾಶ ಕುಟಿನ್ಹಾ, ಹರೀಶ್ ಮಡಿವಾಳ, ಹಾಲು ಪರೀಕ್ಷಕಿ ಸುಜಾತಾ ಇದ್ದರು.
ಕಾರ್ಯನಿರ್ವಹಣಾಧಿಕಾರಿ ಚೈತ್ರಾ ಸ್ವಾಗತಿಸಿ, ವರದಿ ಮಂಡಿಸಿದರು. ಉಪಾಧ್ಯಕ್ಷೆ ವನಿತಾ ವಂದಿಸಿದರು.

Related posts

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತಪ್ರಚಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!