23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಷರತ್ತುಗೊಳ್ಳಪಟ್ಟು ಮರು ನೋಂದಣಿ ಮಾಡಿಕೊಳ್ಳಲು ಸಂಘ ಸಂಸ್ಥೆಗಳಿಗೆ ಅವಕಾಶ

ಬೆಳ್ತಂಗಡಿ: ಕರ್ನಾಟಕ ಸಂಘಗಳ ನೋಂದಣಿ ಅಧಿನಿಯಮ 1960 ರ ಅಡಿಯಲ್ಲಿ ರಾಜ್ಯದಲ್ಲಿ ನೋಂದಣಿಗೊಂಡಿರುವ ಸಂಘ ಸಂಸ್ಥೆಗಳು 5 ವರ್ಷಗಳಿಗೂ ಮೇಲ್ಪಟ್ಟು ಫೈಲಿಂಗ್ ಮಾಡಿಕೊಳ್ಳದೆ ಇರುವ ಸಂಘ ಸಂಸ್ಥೆಗಳನ್ನು ಸಂಘಗಳ ಸದಸ್ಯರ ಹಿತದೃಷ್ಟಿಯಿಂದ ಮತ್ತೊಂದು ಬಾರಿ ದಂಡ ವಿಧಿಸಿ, ಷರತ್ತುಗಳಿಗೊಳಪಟ್ಟು ಅನುಮತಿ ನೀಡಲು ರಾಜ್ಯದ ಸಹಕಾರ ಇಲಾಖೆ ಆದೇಶ ಮಾಡಿದೆ.


ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರು ಈಚೆಗೆ ಸಹಕಾರ ಸಚಿವ ರಾಜಣ್ಣ ಅವರಲ್ಲಿ ಆಗುತ್ತಿದ್ದ ಸಮಸ್ಯೆಯ ಬಗ್ಗೆ ವಿವರಿಸಿದ್ದರು. ಇದಕ್ಕೆ ಶೀಘ್ರವಾಗಿ ಸ್ಪಂದಿಸಿದ ಸಚಿವರು ಸಹಕಾರ ಸಂಘಗಳ ನಿಬಂಧಕರ ಮೂಲಕ ಆದೇಶ ಹೊರಡಿಸಿದ್ದಾರೆ.


5 ವರ್ಷಗಳಿಗೆ ಮೇಲ್ಪಟ್ಟು ಫೈಲಿಂಗ್ ಮಾಡಿಕೊಳ್ಳದೆ ಬಾಕಿ ಇರುವ ಸಂಘ ಸಂಸ್ಥೆಗಳು ಪ್ರತಿ ವರ್ಷಕ್ಕೆ ರೂ. ೩೦೦೦ ಹೆಚ್ಚುವರಿ ದಂಡ ಪಾವತಿಸಿ2024 ರ ಜೂ.30 ರೊಳಗೆ ಫೈಲಿಂಗ್ ಮಾಡಕೊಳ್ಳಬಹುದಾಗಿದೆ. ಸಂಘದ ಎಲ್ಲಾ ಆಡಳಿತ ಆಡಿಟ್ ವರದಿಗಳನ್ನು ಆನ್‌ಲೈನ್‌ನಲ್ಲಿ ಮಾತ್ರ ಸಲ್ಲಿಸುವಂತೆ ಆದೇಶದಲ್ಲಿ ತಿಳಿಸಿಲಾಗಿದೆ.

Related posts

ವೇಣೂರು ಐಟಿಐ: ಸೋಲಾರ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 10 ಡಿವಿಡೆಂಟ್

Suddi Udaya

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya
error: Content is protected !!