22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಷರತ್ತುಗೊಳ್ಳಪಟ್ಟು ಮರು ನೋಂದಣಿ ಮಾಡಿಕೊಳ್ಳಲು ಸಂಘ ಸಂಸ್ಥೆಗಳಿಗೆ ಅವಕಾಶ

ಬೆಳ್ತಂಗಡಿ: ಕರ್ನಾಟಕ ಸಂಘಗಳ ನೋಂದಣಿ ಅಧಿನಿಯಮ 1960 ರ ಅಡಿಯಲ್ಲಿ ರಾಜ್ಯದಲ್ಲಿ ನೋಂದಣಿಗೊಂಡಿರುವ ಸಂಘ ಸಂಸ್ಥೆಗಳು 5 ವರ್ಷಗಳಿಗೂ ಮೇಲ್ಪಟ್ಟು ಫೈಲಿಂಗ್ ಮಾಡಿಕೊಳ್ಳದೆ ಇರುವ ಸಂಘ ಸಂಸ್ಥೆಗಳನ್ನು ಸಂಘಗಳ ಸದಸ್ಯರ ಹಿತದೃಷ್ಟಿಯಿಂದ ಮತ್ತೊಂದು ಬಾರಿ ದಂಡ ವಿಧಿಸಿ, ಷರತ್ತುಗಳಿಗೊಳಪಟ್ಟು ಅನುಮತಿ ನೀಡಲು ರಾಜ್ಯದ ಸಹಕಾರ ಇಲಾಖೆ ಆದೇಶ ಮಾಡಿದೆ.


ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರು ಈಚೆಗೆ ಸಹಕಾರ ಸಚಿವ ರಾಜಣ್ಣ ಅವರಲ್ಲಿ ಆಗುತ್ತಿದ್ದ ಸಮಸ್ಯೆಯ ಬಗ್ಗೆ ವಿವರಿಸಿದ್ದರು. ಇದಕ್ಕೆ ಶೀಘ್ರವಾಗಿ ಸ್ಪಂದಿಸಿದ ಸಚಿವರು ಸಹಕಾರ ಸಂಘಗಳ ನಿಬಂಧಕರ ಮೂಲಕ ಆದೇಶ ಹೊರಡಿಸಿದ್ದಾರೆ.


5 ವರ್ಷಗಳಿಗೆ ಮೇಲ್ಪಟ್ಟು ಫೈಲಿಂಗ್ ಮಾಡಿಕೊಳ್ಳದೆ ಬಾಕಿ ಇರುವ ಸಂಘ ಸಂಸ್ಥೆಗಳು ಪ್ರತಿ ವರ್ಷಕ್ಕೆ ರೂ. ೩೦೦೦ ಹೆಚ್ಚುವರಿ ದಂಡ ಪಾವತಿಸಿ2024 ರ ಜೂ.30 ರೊಳಗೆ ಫೈಲಿಂಗ್ ಮಾಡಕೊಳ್ಳಬಹುದಾಗಿದೆ. ಸಂಘದ ಎಲ್ಲಾ ಆಡಳಿತ ಆಡಿಟ್ ವರದಿಗಳನ್ನು ಆನ್‌ಲೈನ್‌ನಲ್ಲಿ ಮಾತ್ರ ಸಲ್ಲಿಸುವಂತೆ ಆದೇಶದಲ್ಲಿ ತಿಳಿಸಿಲಾಗಿದೆ.

Related posts

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

Suddi Udaya

ಯಾತ್ರಾರ್ಥಿಯಾಗಿ ಬಂದಿದ್ದ ವೃದ್ಧೆಗೆ ಜ್ಯೂಸ್ ನೀಡಿ ಚಿನ್ನಾಭರಣ ಎಗರಿಸಿದ ಅಪರಿಚಿತ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಬಹು ಕೋಟಿ ಹಗರಣ ಪ್ರಕರಣ: ಸೊಸೈಟಿ ಅಧ್ಯಕ್ಷ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿ 9 ಮಂದಿಯ ಆಸ್ತಿ ತೀರ್ಪು ಪೂರ್ವ ಜಪ್ತಿ ಮಾಡಿ ಆದೇಶ

Suddi Udaya
error: Content is protected !!