23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಷರತ್ತುಗೊಳ್ಳಪಟ್ಟು ಮರು ನೋಂದಣಿ ಮಾಡಿಕೊಳ್ಳಲು ಸಂಘ ಸಂಸ್ಥೆಗಳಿಗೆ ಅವಕಾಶ

ಬೆಳ್ತಂಗಡಿ: ಕರ್ನಾಟಕ ಸಂಘಗಳ ನೋಂದಣಿ ಅಧಿನಿಯಮ 1960 ರ ಅಡಿಯಲ್ಲಿ ರಾಜ್ಯದಲ್ಲಿ ನೋಂದಣಿಗೊಂಡಿರುವ ಸಂಘ ಸಂಸ್ಥೆಗಳು 5 ವರ್ಷಗಳಿಗೂ ಮೇಲ್ಪಟ್ಟು ಫೈಲಿಂಗ್ ಮಾಡಿಕೊಳ್ಳದೆ ಇರುವ ಸಂಘ ಸಂಸ್ಥೆಗಳನ್ನು ಸಂಘಗಳ ಸದಸ್ಯರ ಹಿತದೃಷ್ಟಿಯಿಂದ ಮತ್ತೊಂದು ಬಾರಿ ದಂಡ ವಿಧಿಸಿ, ಷರತ್ತುಗಳಿಗೊಳಪಟ್ಟು ಅನುಮತಿ ನೀಡಲು ರಾಜ್ಯದ ಸಹಕಾರ ಇಲಾಖೆ ಆದೇಶ ಮಾಡಿದೆ.


ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರು ಈಚೆಗೆ ಸಹಕಾರ ಸಚಿವ ರಾಜಣ್ಣ ಅವರಲ್ಲಿ ಆಗುತ್ತಿದ್ದ ಸಮಸ್ಯೆಯ ಬಗ್ಗೆ ವಿವರಿಸಿದ್ದರು. ಇದಕ್ಕೆ ಶೀಘ್ರವಾಗಿ ಸ್ಪಂದಿಸಿದ ಸಚಿವರು ಸಹಕಾರ ಸಂಘಗಳ ನಿಬಂಧಕರ ಮೂಲಕ ಆದೇಶ ಹೊರಡಿಸಿದ್ದಾರೆ.


5 ವರ್ಷಗಳಿಗೆ ಮೇಲ್ಪಟ್ಟು ಫೈಲಿಂಗ್ ಮಾಡಿಕೊಳ್ಳದೆ ಬಾಕಿ ಇರುವ ಸಂಘ ಸಂಸ್ಥೆಗಳು ಪ್ರತಿ ವರ್ಷಕ್ಕೆ ರೂ. ೩೦೦೦ ಹೆಚ್ಚುವರಿ ದಂಡ ಪಾವತಿಸಿ2024 ರ ಜೂ.30 ರೊಳಗೆ ಫೈಲಿಂಗ್ ಮಾಡಕೊಳ್ಳಬಹುದಾಗಿದೆ. ಸಂಘದ ಎಲ್ಲಾ ಆಡಳಿತ ಆಡಿಟ್ ವರದಿಗಳನ್ನು ಆನ್‌ಲೈನ್‌ನಲ್ಲಿ ಮಾತ್ರ ಸಲ್ಲಿಸುವಂತೆ ಆದೇಶದಲ್ಲಿ ತಿಳಿಸಿಲಾಗಿದೆ.

Related posts

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಉಜಿರೆ ವಲೇರಿಯನ್ ಡಯಾಸ್ ನಿಧನ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya
error: Content is protected !!