April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

ಇಂದಬೆಟ್ಟು: ಇಲ್ಲಿಯ ಗೊಂಚಲು ಸ್ತ್ರೀ ಶಕ್ತಿ ಮಹಾಸಭೆಯು ಶ್ರೀಮತಿ ಚಂದ್ರಕಾತಿಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.11 ರಂದು ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾರವರು ಉಪಸ್ಥಿತಿ ಇದ್ದು ಶುಭಹಾರೈಸಿದರು. ವಿನೋದ್ ಪ್ರಸಾದ್ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು. ಕಪಿಲಾ ಸ್ತ್ರೀ ಶಕ್ತಿ ವಿವಿದೋದ್ದೇಶ ಸಹಕಾರ ಬ್ಯಾಂಕ್ ಹಾಗೂ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಬಗ್ಗೆ ವಿನಯರವರು ಮಾಹಿತಿ ನೀಡಿದರು.


ಸಂಜೀವಿನಿ ಎಮ್.ಬಿ.ಕೆ ವಾಣಿಶ್ರೀ, ಅಧ್ಯಕ್ಷೆ ಹೇಮಲತಾ, ಕಾರ್‍ಯಕರ್ತೆ ರೋಹಿಣ, ಅಂಗನವಾಡಿ ಕಾರ್‍ಯಕರ್ತೆಯರು, ಸರ್ವ ಸ್ತ್ರೀ ಶಕ್ತಿ ಸದಸ್ಯರು ಭಾಗವಹಿಸಿದರು.


ನೂತನ ಪದಾಧಿಕಾರಿಗಳ ಅಧ್ಯಕ್ಷರಾಗಿ ಚಂದ್ರಕಾಂತಿ ಪುನರಾಯ್ಕೆ ಮಾಡಲಾಯಿತು.
ಕಾರ್ಯದರ್ಶಿಯಾಗಿ ಮಮತ, ಕೋಶಾಧಿಕಾರಿಯಾಗಿ ಲಕ್ಷ್ಮೀ ಆಯ್ಕೆಯಾದರು.
ಕವಿತಾ ವರದಿ ವಾಚಿಸಿ, ಅಂ.ಕಾರ್‍ಯಕರ್ತೆ ಶಶಿಕಲಾ ಕಾರ್‍ಯಕ್ರಮ ನಿರೂಪಿಸಿ, ಪಾಸು ವಂದಿಸಿದರು.

Related posts

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

Suddi Udaya

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

Suddi Udaya

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya
error: Content is protected !!