25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

ಉಜಿರೆ: ಪ್ರಕೃತಿಯೊಂದಿಗಿನ ಮನುಜರ ಬಾಂಧವ್ಯದ ಸಂಕೇತವಾಗಿ ಪ್ರತಿಯೊಬ್ಬ ವಿದ್ಯಾರ್ಥಿಯು ಮರಕ್ಕೆ ರಾಖಿ ಕಟ್ಟುವುದು ಉತ್ತಮ ಕಾರ್ಯ. ಪರಿಸರವನ್ನು ಉಳಿಸುವ ಮತ್ತು ಪೋಷಿಸುವ ಕಾರ್ಯ ನಮ್ಮದಾಗಿದೆ. ಮಾನವರು ಮತ್ತು ನೈಸರ್ಗಿಕ ಪ್ರಪಂಚದ ನಡುವಿನ ಸಂಬಂಧದ ಬಗ್ಗೆ ವಿದ್ಯಾರ್ಥಿಗಳ ತಿಳುವಳಿಕೆಯನ್ನು ಈ ವೃಕ್ಷಾಬಂಧನ ಕಟ್ಟುವ ಕಾರ್ಯ ಸುಂದರವಾಗಿ ಪ್ರತಿಬಿಂಬಿಸಿದೆ” ಎಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆಯ ವಿಜ್ಞಾನ ಶಿಕ್ಷಕಿ ರೂಪಶ್ರೀ ಹೇಳಿದರು.

ಅವರು ಸೆ.11 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ಆಯೋಜಿಸಿದ್ದ ‘ವೃಕ್ಷಾಬಂಧನ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಾವೇ ತಯಾರು ಮಾಡಿದ ಪರಿಸರಸ್ನೇಹಿ ರಾಖಿಯನ್ನು ಗಿಡಗಳಿಗೆ ಕಟ್ಟಿ ವೃಕ್ಷ ಸಂರಕ್ಷಣೆ ಪ್ರತಿಜ್ಞೆ ಮಾಡಿದರು.

ವಿದ್ಯಾರ್ಥಿನಿ ಅಹಲ್ಯ ಪರಿಸರ ಭಾವಗೀತೆಯನ್ನು ಹಾಡಿದರು. ವಿದ್ಯಾರ್ಥಿನಿ ರಿತಿಕಾ ವೃಕ್ಷಾಬಂಧನದ ಮಹತ್ವ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು.

ವೇದಿಕೆಯಲ್ಲಿ ಕಲಾ ಸಂಘದ ಸಂಯೋಜಕ ಶಿಕ್ಷಕಿ ಸುಮಾ ಶ್ರೀನಾಥ್, ಕಲಾಸಿಂಧು ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ವಿದ್ಯಾರ್ಥಿನಿ ಶ್ರೀಪ್ರಿಯಾ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ರಚನಾ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಅನ್ನಪೂರ್ಣ ಸ್ವಾಗತಿಸಿ, ಸಮೃದ್ಧಿ ವಂದಿಸಿದರು.

Related posts

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya
error: Content is protected !!