ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

ಉಜಿರೆ: ಪ್ರಕೃತಿಯೊಂದಿಗಿನ ಮನುಜರ ಬಾಂಧವ್ಯದ ಸಂಕೇತವಾಗಿ ಪ್ರತಿಯೊಬ್ಬ ವಿದ್ಯಾರ್ಥಿಯು ಮರಕ್ಕೆ ರಾಖಿ ಕಟ್ಟುವುದು ಉತ್ತಮ ಕಾರ್ಯ. ಪರಿಸರವನ್ನು ಉಳಿಸುವ ಮತ್ತು ಪೋಷಿಸುವ ಕಾರ್ಯ ನಮ್ಮದಾಗಿದೆ. ಮಾನವರು ಮತ್ತು ನೈಸರ್ಗಿಕ ಪ್ರಪಂಚದ ನಡುವಿನ ಸಂಬಂಧದ ಬಗ್ಗೆ ವಿದ್ಯಾರ್ಥಿಗಳ ತಿಳುವಳಿಕೆಯನ್ನು ಈ ವೃಕ್ಷಾಬಂಧನ ಕಟ್ಟುವ ಕಾರ್ಯ ಸುಂದರವಾಗಿ ಪ್ರತಿಬಿಂಬಿಸಿದೆ” ಎಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆಯ ವಿಜ್ಞಾನ ಶಿಕ್ಷಕಿ ರೂಪಶ್ರೀ ಹೇಳಿದರು.

ಅವರು ಸೆ.11 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ಆಯೋಜಿಸಿದ್ದ ‘ವೃಕ್ಷಾಬಂಧನ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಾವೇ ತಯಾರು ಮಾಡಿದ ಪರಿಸರಸ್ನೇಹಿ ರಾಖಿಯನ್ನು ಗಿಡಗಳಿಗೆ ಕಟ್ಟಿ ವೃಕ್ಷ ಸಂರಕ್ಷಣೆ ಪ್ರತಿಜ್ಞೆ ಮಾಡಿದರು.

ವಿದ್ಯಾರ್ಥಿನಿ ಅಹಲ್ಯ ಪರಿಸರ ಭಾವಗೀತೆಯನ್ನು ಹಾಡಿದರು. ವಿದ್ಯಾರ್ಥಿನಿ ರಿತಿಕಾ ವೃಕ್ಷಾಬಂಧನದ ಮಹತ್ವ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು.

ವೇದಿಕೆಯಲ್ಲಿ ಕಲಾ ಸಂಘದ ಸಂಯೋಜಕ ಶಿಕ್ಷಕಿ ಸುಮಾ ಶ್ರೀನಾಥ್, ಕಲಾಸಿಂಧು ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ವಿದ್ಯಾರ್ಥಿನಿ ಶ್ರೀಪ್ರಿಯಾ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ರಚನಾ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಅನ್ನಪೂರ್ಣ ಸ್ವಾಗತಿಸಿ, ಸಮೃದ್ಧಿ ವಂದಿಸಿದರು.

Related posts

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya

ತಾಲೂಕು ಮಟ್ಟದ ಶಟಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡ ಮತ್ತು ಚೋಮ ರವರ ಮನೆಗೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಭೇಟಿ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೋಂಮ್ಸ್ ವತಿಯಿಂದ ಕೊಡುಗೆ

Suddi Udaya

ನಾವೂರು: ಯಮುನ ಅಮ್ಮು ಮುಗೇರರ ಮನೆಗೆ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!