27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.54.80 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.10 ಡಿವಿಡೆಂಡ್

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು  ಸೆ.12ರಂದು ಸಂಘದ ಜ್ಯೇಷ್ಠ ಸಭಾಭವನದಲ್ಲಿ ಜರುಗಿತು.

ಸಂಘದ ಅಧ್ಯಕ್ಷರಾದ ನ್ಯಾಯವಾದಿ ಭಗೀರಥ ಜಿ ರವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 2022-23ನೇ ಸಾಲಿನಲ್ಲಿ ಸಂಘವು ರೂ.114ಕೋಟಿ ವ್ಯವಹಾರ ನಡೆಸಿ, ರೂ.54.80 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.10 ಡಿವಿಡೆಂಡ್ ನೀಡುವುದಾಗಿ ಘೋಷಿಸಿದರು.


ಕಳೆದ ಶೈಕ್ಷಣಿಕ ಸಾಲಿನಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಸಂಘದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು. ಅತೀ ಹೆಚ್ಚು ಪಿಗ್ಮಿ ಸಂಗ್ರಹಣೆ ಮಾಡಿದ ಆನಂದ ಕೋಟ್ಯಾನ್ ರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.


ರೈತರಿಗೆ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾ ದ ಚಂದ್ರಶೇಖರ ಮತ್ತು ತಂಡದವರು ಮಾಹಿತಿ ನೀಡಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಕಲಾ ಎನ್ ವಾರ್ಷಿಕ ವರದಿ ಮಂಡಿಸಿದರು.  ಸಂಘದ ಉಪಾಧ್ಯಕ್ಷೆ ಸುಜಿತಾ.ವಿ.ಬಂಗೇರ ನಿರ್ದೇಶಕರುಗಳಾದ ,  ನಾರಾಯಣ ರಾವ್ ಮುಗುಳಿ ವಡಿವೇಲು, ಶಾರದಾ, ಗೋಪಿನಾಥ ನಾಯಕ್, ಭುಜಂಗ ಕೆ ಶೆಟ್ಟಿ, ಚಂದ್ರರಾಜ್, ಪುರಂದರ ಶೆಟ್ಟಿ, ಹರೀಶ್ಚಂದ್ರ,ಡಿ.ಸಿ.ಸಿ. ಪ್ರತಿನಿಧಿ ಸಿರಾಜುದ್ದೀನ್ ಸಂಘದ ಸದಸ್ಯರು,ನ ಸಿಬ್ಬಂದಿಗಳು ಸಭೆಯಲ್ಲಿ  ಉಪಸ್ಥಿತರಿದ್ದರು. ನಿರ್ದೇಶಕರಾದ ಸಚಿನ್ ಕುಮಾರ್ ನೂಜೋಡಿ ಧನ್ಯವಾದವಿತ್ತರು.

Related posts

ಮಡಂತ್ಯಾರು: ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮುರಳಿ ಬಲಿಪ, ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya

ವೇಣೂರಿನಲ್ಲಿ ಕ್ರಿಸ್ಮಸ್ ಸೌಹಾರ್ದ ಕೂಟ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya
error: Content is protected !!