23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ನಡ: ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆಯು ಸೆ.12ರಂದು ಸಂಘದ ವಠಾರದಲ್ಲಿ ಜರುಗಿತು.


ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪ್ರವೀಣ್ ವಿ.ಜಿ ವಹಿಸಿದ್ದರು. ವಿಸ್ತರಣಾಧಿಕಾರಿ ಯಮುನಾ ಉಪಸ್ಥಿತರಿದ್ದರು. ಸಂಘವು ರೂ. 4,56,947.15 ಲಾಭ ಬಂದಿದ್ದು, ಸಂಘದ ಸದಸ್ಯರಿಗೆ ಒಟ್ಟು ರೂ. 2,18,300 ಬೋನಸ್ ವಿತರಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ 80% ಕ್ಕಿಂತ ಹೆಚ್ಚು ಅಂಕ ಪಡೆದ 7 ಸದಸ್ಯರ ಮಕ್ಕಳಿಗೆ ಸಹಾಯಧನ ವಿತರಿಸಲಾಯಿತು. ಸಂಘಕ್ಕೆ ಅತೀ ಹೆಚ್ಚು ಹಾಲು ಹಾಕಿ ಪ್ರಥಮ ಸ್ಥಾನ ಪಡೆದ ಪ್ರವೀಣ್ ವಿ.ಜಿ, ದ್ವಿತೀಯ ದಿವಾಕರ ಸಾಲ್ಯಾನ್, ತೃತೀಯ ಆಶ್ರಯ ಅಜ್ರಿ ಮೂಡಬೆಟ್ಟು ಇವರುಗಳನ್ನು ಸನ್ಮಾನಿಸಲಾಯಿತು.


ನಿರ್ದೇಶಕರಾದ ನಾಭಿರಾಜ ಜೈನ್, ದಿವಾಕರ ಸಾಲ್ಯಾನ್, ದೇಜಪ್ಪ ಶೆಟ್ಟಿ, ಪುರುಷೋತ್ತಮ ಗೌಡ, ಬೇಬಿ ಶೆಟ್ಟಿ, ಕೃಷ್ಣಪ್ಪ ಗೌಡ, ಸುಂದರ ನಾಕ್, ಸಂತೋಷ್ ಸುರ್ಯ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
ಕಾರ್ಯದರ್ಶಿ ಶಾಂತಿ ಪ್ರಾರ್ಥಿಸಿ, ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷೆ ಸುಮಿತ್ರ ಶೆಟ್ಟಿ ಸ್ವಾಗತಿಸಿ, ನಿರ್ದೇಶಕಿ ಸುಲತಾ ಶೆಟ್ಟಿ ಧನ್ಯವಾದವಿತ್ತರು.

Related posts

ಬಳಂಜ: ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ

Suddi Udaya

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya
error: Content is protected !!