25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಬೆಳ್ತಂಗಡಿ: ಹಾಲು ಉತ್ಪಾದಕ ಒಕ್ಕೂಟದ ಮೂಲಕ ಸದಸ್ಯರಿಗೆ ಅನೇಕ ಅನುಕೂಲತೆಗಳನ್ನು ಕಲ್ಪಿಸಲಾಗಿದ್ದು ಅದರ ಪ್ರಯೋಜನ ಪಡೆದು, ಗುಣಮಟ್ಟದ ಹಾಲು ಪೂರೈಕೆಯಾಗುವತ್ತ ಗಮನಹರಿಸಬೇಕು ಎಂದು ದ.ಕ.ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಸುಚಿತ್ರಾ ಹೇಳಿದರು.
ಅವರು ಸೆ.12 ರಂದು ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಒಕ್ಕೂಟದ ಮಿನಿ ಡೈರಿ, ನಂದಿನಿ ಸಮೃದ್ಧಿ, ಹೆಣ್ಣುಕರು ಸಾಕಾಣೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.


ವರದಿ ಸಾಲಿನಲ್ಲಿ ರೂ. 79,63,897 ಮೊತ್ತದ ಹಾಲನ್ನು ಸಂಗ್ರಹಿಸಲಾಗಿದ್ದು ರೂ.83,39,248 ಮೊತ್ತದಲ್ಲಿ ಒಕ್ಕೂಟಕ್ಕೆ ಹಾಗೂ ಸ್ಥಳೀಯವಾಗಿ ಮಾರಾಟ ಮಾಡಲಾಗಿದೆ. ರೂ.1,45,326 ರಷ್ಟು ಲಾಭ ಬಂದಿರುವುದನ್ನು ಸಭೆಯಲ್ಲಿ ತಿಳಿಸಲಾಯಿತು.


ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ನಿರಂಜನ ಜೋಶಿ ಅವರು ಹಾಲು ಸಂಗ್ರಹ ಹೆಚ್ಚಾಗುವಂತೆ ಎಲ್ಲರೂ ಶ್ರಮಿಸುವಂತೆ ವಿನಂತಿಸಿದರು.
ಹೆಚ್ಚು ಹಾಲು ಪೂರೈಸುತ್ತಿರುವ ಬೇಬಿ ಪೂಜಾರಿ, ರವಿ ಪೂಜಾರಿ, ಹರೀಶ್ ಮಡಿವಾಳ ಅವರಿಗೆ ಬಹುಮಾನ ನೀಡಲಾಯಿತು. ಸದಸ್ಯರ ಪ್ರತಿಭಾನ್ವಿತ ಮಕ್ಕಳನ್ನು ಅಭಿನಂದಿಸಲಾಯಿತು.


ಸಂಘದ ನಿರ್ದೇಶಕರುಗಳಾದ ಮೋಹನ ಹೆಗ್ಡೆ, ಹರೀಶ್ ಪೂಜಾರಿ, ಪ್ರಮೋದ ಪೂಜಾರಿ, ಜಗನ್ನಾಥ, ಆನಂದ ಪೂಜಾರಿ, ಸುಶೀಲಾ, ರೀಟಾ ಡಿ ಸೋಜ, ಆನಂದ ಪ್ರಕಾಶ ಕುಟಿನ್ಹಾ, ಹರೀಶ್ ಮಡಿವಾಳ, ಹಾಲು ಪರೀಕ್ಷಕಿ ಸುಜಾತಾ ಇದ್ದರು.
ಕಾರ್ಯನಿರ್ವಹಣಾಧಿಕಾರಿ ಚೈತ್ರಾ ಸ್ವಾಗತಿಸಿ, ವರದಿ ಮಂಡಿಸಿದರು. ಉಪಾಧ್ಯಕ್ಷೆ ವನಿತಾ ವಂದಿಸಿದರು.

Related posts

ಬೆಳಾಲುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಹೊಚ್ಚ ಹೊಸ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ 10% ಡಿಸ್ಕೌಂಟ್ ಸೇಲ್

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಯೂಟ್ಯೂಬರ್ಸ್ ಹಾಗೂ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಆರೋಪ: ಸ್ಥಳದಲ್ಲಿ ಜನ ಜಮಾಯಿಸಿ ಉದ್ವಿಗ್ನ ಸ್ಥಿತಿ- ಪೊಲೀಸರಿಂದ ಲಾಠಿ ಚಾರ್ಜ್. ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

Suddi Udaya

ಬೆಳಾಲು ಗೌಡರ ಯಾನೆ ಒಕ್ಕಲಿಗರ ವಾರ್ಷಿಕೋತ್ಸವ

Suddi Udaya
error: Content is protected !!