March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

ಬೆಳ್ತಂಗಡಿ: ಕಳೆದ 11 ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ನಡೆದ ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯರವರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಒಕ್ಕಲಿಗರ ಹೋರಾಟ ಸಮಿತಿಯಿಂದ ಆಗ್ರಹಿಸಿ ಸೆ.12 ಮತ್ತು 13ರಂದು ಮಂಗಳೂರಿನ ಕ್ಲಾಕ್ ಟವರ್ ಹತ್ತಿರದ ತಾಲೂಕು ಕಚೇರಿ ಎದುರು ನಡೆಯಲಿರುವ ಜಿಲ್ಲಾ ಮಟ್ಟದ ಧರಣಿ ಸತ್ಯಾಗ್ರಹಕ್ಕೆ ಸೆ.12ರಂದು ಬೆಳಿಗ್ಗೆ ಚಾಲನೆ ನೀಡಲಾಯಿತು.


ಪ್ರಕರಣದ ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆಯುವ ಈ ಧರಣಿಯಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಒಕ್ಕಲಿಗರ ಸಂಘದ ಅಧ್ಯಕ್ಷ ಕುಶಲಪ್ಪ ಗೌಡ ಪೂವಾಜೆ, ಗೌರವಾಧ್ಯಕ್ಷರಾದ ಪದ್ಮ ಗೌಡ, ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ದೇವಸ ಸವಣಾಲು, ಪ್ರಧಾನ ಕಾರ್ಯದರ್ಶಿ ಗಣೇಶ್ ಕಡಿರುದ್ಯಾವರ, ಕೋಶಾಧಿಕಾರಿ ಬಾಲಕೃಷ್ಣ ಗೌಡ ಬಿರ್ಮೋಟ್ಟು, ಸಂಘಟನಾ ಕಾರ್ಯದರ್ಶಿ ಜಯಾನಂದ ಗೌಡ ಪ್ರಜ್ವಲ್, ಪ್ರಸನ್ನ ಗೌಡ ಬಾರ್ಯ, ವಿಜಯಗೌಡ, ಉಷಾ ವೆಂಕಟರಮಣ ಗೌಡ, ಸುರೇಶ್ ಕೌಡಂಗೆ ಹಾಗೂ ಗ್ರಾಮ ಸಮಿತಿ ಎಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಉಪಸಿತರಿದ್ದರು.

Related posts

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಜೈಲಿನಿಂದ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!