25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿ ಮುಂಡಾಜೆ ಕಾರ್ಯಕ್ಷೇತ್ರದ ನಂದಿನಿ ಜ್ಞಾನವಿಕಾಸ ಕೇಂದ್ರದಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರವನ್ನು ಮುಂಡಾಜೆ ಗ್ರಾಮಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಜನಜಾಗೃತಿ ವಲಯಾಧ್ಯಕ್ಷ ನಾಮದೇವ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ರುಡ್ ಸೆಟ್ ಸಂಸ್ಥೆಯ ಪ್ರವೀಣ್ ರವರು ಸ್ವಉದ್ಯೋಗ ಪ್ರಾರಂಭಿಸುವ ಮುನ್ನ ಅನುಸರಿಸಬೇಕಾದ ಪೂರ್ವ ತಯಾರಿಗಳಾದ ಸ್ಥಳದ ಆಯ್ಕೆ, ಪಡೆಯಬೇಕಾದ ಲೈಸೆನ್ಸ್, ಬಂಡವಾಳ, ಮಾರ್ಕೆಟಿಂಗ್ ಬಗ್ಗೆ ವಿವರವಾಗಿ ತಿಳಿಸಿದರು. ಸ್ವಉದ್ಯೋಗ ಮಾಡಬಹುದಾದಂತಹ ಬತ್ತಿ ತಯಾರಿ, ಹಾಳೆ ತಟ್ಟೆ ಘಟಕ, ಅಗರಬತ್ತಿ ತಯಾರಿ, ಅಣಬೆ ಕೃಷಿ, ಜೈವಿಕ ಗೊಬ್ಬರ ತಯಾರಿ, ಟೈಲರಿಂಗ್ , ಬ್ಯೂಟೀಷಿಯನ್ ,ನರ್ಸರಿ ,ಜೇನುಕೃಷಿ, ಹೈನುಗಾರಿಕೆ ,ಕೋಳಿಸಾಕಣೆ, ಮಸಾಲೆ ಪೌಡರ್ ತಯಾರಿ, ವ್ಯಾಪಾರ ಮಾಡುವ ಬಗ್ಗೆ ಪ್ರೇರಣೆ ನೀಡಿದರು.

ಗ್ರಾಮಪಂಚಾಯತ್ ಅಧ್ಯಕ್ಷರಾದ ಗಣೇಶ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಮಧುರಾ ಮತ್ತು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Suddi Udaya

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

Suddi Udaya

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

Suddi Udaya
error: Content is protected !!