September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿ ಮುಂಡಾಜೆ ಕಾರ್ಯಕ್ಷೇತ್ರದ ನಂದಿನಿ ಜ್ಞಾನವಿಕಾಸ ಕೇಂದ್ರದಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರವನ್ನು ಮುಂಡಾಜೆ ಗ್ರಾಮಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಜನಜಾಗೃತಿ ವಲಯಾಧ್ಯಕ್ಷ ನಾಮದೇವ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ರುಡ್ ಸೆಟ್ ಸಂಸ್ಥೆಯ ಪ್ರವೀಣ್ ರವರು ಸ್ವಉದ್ಯೋಗ ಪ್ರಾರಂಭಿಸುವ ಮುನ್ನ ಅನುಸರಿಸಬೇಕಾದ ಪೂರ್ವ ತಯಾರಿಗಳಾದ ಸ್ಥಳದ ಆಯ್ಕೆ, ಪಡೆಯಬೇಕಾದ ಲೈಸೆನ್ಸ್, ಬಂಡವಾಳ, ಮಾರ್ಕೆಟಿಂಗ್ ಬಗ್ಗೆ ವಿವರವಾಗಿ ತಿಳಿಸಿದರು. ಸ್ವಉದ್ಯೋಗ ಮಾಡಬಹುದಾದಂತಹ ಬತ್ತಿ ತಯಾರಿ, ಹಾಳೆ ತಟ್ಟೆ ಘಟಕ, ಅಗರಬತ್ತಿ ತಯಾರಿ, ಅಣಬೆ ಕೃಷಿ, ಜೈವಿಕ ಗೊಬ್ಬರ ತಯಾರಿ, ಟೈಲರಿಂಗ್ , ಬ್ಯೂಟೀಷಿಯನ್ ,ನರ್ಸರಿ ,ಜೇನುಕೃಷಿ, ಹೈನುಗಾರಿಕೆ ,ಕೋಳಿಸಾಕಣೆ, ಮಸಾಲೆ ಪೌಡರ್ ತಯಾರಿ, ವ್ಯಾಪಾರ ಮಾಡುವ ಬಗ್ಗೆ ಪ್ರೇರಣೆ ನೀಡಿದರು.

ಗ್ರಾಮಪಂಚಾಯತ್ ಅಧ್ಯಕ್ಷರಾದ ಗಣೇಶ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಮಧುರಾ ಮತ್ತು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಬಾರ್ಯ: ಆದಿಶಕ್ತಿ ಗೆಳೆಯರ ಬಳಗ ಕುಂಟಾಲಕಟ್ಟೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಿಟ್ಟಡೆ: ಕುಂಭಶ್ರೀ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಸಂಕಲ್ಪ-2025’ ಓರಿಯಂಟೇಶನ್

Suddi Udaya

ಹತ್ಯಡ್ಕ ತುಂಬೆತ್ತಡ್ಕ ಕಾಳಬೈರವ ಸ್ವಾಮಿ ಶ್ರೀ ಮಾರಿ ಅಮ್ಮನ ಮಾರಿಗುಡಿಯಲ್ಲಿ ವಾರ್ಷಿಕ ಮಾರಿ ಪೂಜೆ ಉತ್ಸವ

Suddi Udaya

ತೋಟತ್ತಾಡಿ : 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya
error: Content is protected !!