July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿ ಮುಂಡಾಜೆ ಕಾರ್ಯಕ್ಷೇತ್ರದ ನಂದಿನಿ ಜ್ಞಾನವಿಕಾಸ ಕೇಂದ್ರದಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರವನ್ನು ಮುಂಡಾಜೆ ಗ್ರಾಮಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಜನಜಾಗೃತಿ ವಲಯಾಧ್ಯಕ್ಷ ನಾಮದೇವ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ರುಡ್ ಸೆಟ್ ಸಂಸ್ಥೆಯ ಪ್ರವೀಣ್ ರವರು ಸ್ವಉದ್ಯೋಗ ಪ್ರಾರಂಭಿಸುವ ಮುನ್ನ ಅನುಸರಿಸಬೇಕಾದ ಪೂರ್ವ ತಯಾರಿಗಳಾದ ಸ್ಥಳದ ಆಯ್ಕೆ, ಪಡೆಯಬೇಕಾದ ಲೈಸೆನ್ಸ್, ಬಂಡವಾಳ, ಮಾರ್ಕೆಟಿಂಗ್ ಬಗ್ಗೆ ವಿವರವಾಗಿ ತಿಳಿಸಿದರು. ಸ್ವಉದ್ಯೋಗ ಮಾಡಬಹುದಾದಂತಹ ಬತ್ತಿ ತಯಾರಿ, ಹಾಳೆ ತಟ್ಟೆ ಘಟಕ, ಅಗರಬತ್ತಿ ತಯಾರಿ, ಅಣಬೆ ಕೃಷಿ, ಜೈವಿಕ ಗೊಬ್ಬರ ತಯಾರಿ, ಟೈಲರಿಂಗ್ , ಬ್ಯೂಟೀಷಿಯನ್ ,ನರ್ಸರಿ ,ಜೇನುಕೃಷಿ, ಹೈನುಗಾರಿಕೆ ,ಕೋಳಿಸಾಕಣೆ, ಮಸಾಲೆ ಪೌಡರ್ ತಯಾರಿ, ವ್ಯಾಪಾರ ಮಾಡುವ ಬಗ್ಗೆ ಪ್ರೇರಣೆ ನೀಡಿದರು.

ಗ್ರಾಮಪಂಚಾಯತ್ ಅಧ್ಯಕ್ಷರಾದ ಗಣೇಶ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಮಧುರಾ ಮತ್ತು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್: ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಾಗಾರ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಆರೋರ 2K26’ ಕಾಮರ್ಸ್ ಫೆಸ್ಟ್

Suddi Udaya

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

Suddi Udaya

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya
error: Content is protected !!