25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ

ಬೆಳ್ತಂಗಡಿ ಮಂಡಲದ ರೈತ ಮೋರ್ಚಾದ ವತಿಯಿಂದ ಮಳೆಯ ಅಭಾವದಿಂದ ಉಂಟಾಗಿರುವ ಬರಗಾಲದ ಸಮಸ್ಯೆ ವಿದ್ಯುತ್ ಅಭಾವದಿಂದ ರೈತರ ಪಂಪ್ ಸೆಟ್ ಗಳಿಗೆ ಅನಿಯಮಿತ ಲೋಡ್ ಶೆಡ್ಡಿಂಗ್ ಮತ್ತು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಆಡಳಿತದ ಅವಧಿಯಲ್ಲಿ ಬಿಜೆಪಿ ನೇತೃತ್ವದ ಆಡಳಿತದ ಸಂದರ್ಭದ ರೈತಪರ ಯೋಜನೆಗಳನ್ನು ರದ್ದುಗೊಳಿಸಿರುವುದು ಮತ್ತು ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಯುವ ಕುರಿತು ಪ್ರತಿಭಟನೆಯನ್ನು ಬೆಳ್ತಂಗಡಿ ಮಿನಿವಿಧಾನ ಸೌಧ ಎದುರು ನಡೆಸಿ ನಂತರ ಬೆಳ್ತಂಗಡಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಡಾ. ನವೀನ್ ರಾಜ್ಯ ಕಾರ್ಯದರ್ಶಿ, ಮಹೇಶ್ ಕುಮಾರ್ ಮೇನಾಲ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷರು, ವಸಂತ ಅಣ್ಣಲಿಕೆ,ರಾಘವೇಂದ್ರ ಭಟ್ ಜಿಲ್ಲಾ ಕಾರ್ಯದರ್ಶಿ ಮಂಡಲ ರೈತ ಮೋರ್ಚಾ ಅಧ್ಯಕ್ಷ ಜಯಂತ ಗೌಡ ಗುರಿಪಲ್ಲ, ಮಂಡಲ ಪ್ರದಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಮಂಡಲ ಉಪಾಧ್ಯಕ್ಷ ಸೀತಾರಾಮ ಬಿ ಎಸ್, ರೈತ ಮೋರ್ಚಾ ಪ್ರ.ಕಾರ್ಯದರ್ಶಿ ಗಳಾದ ಕಾಂತಪ್ಪ ಗೌಡ, ಕೆ ವಿ ಪ್ರಸಾದ್, ಎಲ್.ಡಿ ಬ್ಯಾಂಕ್ ಉಪಾಧ್ಯಕ್ಷ ಆನಂದ ಗೌಡ, ಆನಂದ್ ನಾಯ್ಕ್ ದನಿಲ ಹತ್ಯಡ್ಕ, ಪ್ರಕಾಶ್ ಎಳನೀರು ಮಲವಂತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷ ರು, ದಿನೇಶ್ ಗೌಡ ಮಲವಂತಿಗೆ ರಾಧಾಕೃಷ್ಣ, ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

Suddi Udaya

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya
error: Content is protected !!