23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.13 ರಂದು ಸಂಘದ ಸಭಾಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪಿ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದರು.

ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ರವರು ಹವಾಮಾನ ಆಧಾರಿತ ಬೆಳೆ ವಿಮೆಯ ಬಗ್ಗೆ ಮಾಹಿತಿ ನೀಡಿದರು.

ಸಂಘದ ವತಿಯಿಂದ ವಿಶೇಷ ಸಾಧನೆ ಮಾಡಿದ ಉಮೇಶ್ ಗೌಡ ಬಡಕೈಲು, ಚಿನ್ನಮ್ಮ ಗುಂಪಕಲ್ಲು, ಹೊನ್ನಪ್ಪ ಗೌಡ ಪೂವಾಜೆ, ವೆಂಕಪ್ಪ ಗೌಡ ಕೇಚೋಡಿ, ಆನಂದ ಗೌಡ, ಕುಸುಮಾವತಿ, ಭವ್ಯ ಆಲಂಬಿಲ, ಪ್ರಸನ್ನ ಕುಮಾರ್ ಕಂರ್ಬಿಲ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಂಘದ ಸದಸ್ಯರ ಮಕ್ಕಳಾದ ಕಳೆದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಾದ ನಿರೀಕ್ಷ, ಭರತೇಶ್, ಅನನ್ಯ, ಹರ್ಷಿತ, ಸುಜಯ, ಸಂದೀಪ್, ನಿಧಿ ಎ, ಅನನ್ಯ, ಪೂಜಾ, ವಿಜೇತ್, ಭವ್ಯಶ್ರೀ, ರೂಪೇಶ್ ಆರ್, ದೀಕ್ಷಿತಾ, ಹಿಶಾ ಇವರಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ ವಾರ್ಷಿಕ ವರದಿ ಮಂಡಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಈಶ್ವರ ಭಟ್ ಕೆ., ನಿರ್ದೇಶಕರುಗಳಾದ ಜಾರಪ್ಪ ಗೌಡ ಎಸ್, ಮಹಾಬಲ ಶೆಟ್ಟಿ, ಪದ್ಮನಾಭ ಗೌಡ, ವಿಶ್ವನಾಥ ಕೆ., ವಿಠಲ ಭಂಡಾರಿ, ಶ್ರೀಮತಿ ಪ್ರೇಮಾವತಿ , ವೇದಾವತಿ, ವಿಶ್ವನಾಥ ಎಂ.ಕೆ., ಕೇಶವ ಕೆ. , ಮೋನಪ್ಪ ಬಿ ಉಪಸ್ಥಿತರಿದ್ದರು.

Related posts

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya
error: Content is protected !!