25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿವರದಿ

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ


ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 2023-24 ನೇ ವಿದ್ಯಾರ್ಥಿಗಳ ಬೆಳ್ತಂಗಡಿ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆಯು ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಹಭಾಗಿತ್ವದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್.ಎಸ್ ವಿರೂಪಾಕ್ಷ ನೆರವೇರಿಸಿ ಮಾತನಾಡಿ ” ನಂಬಿಕೆಗಳು ಎಷ್ಟು ನಿಜವೋ ಹಾಗೆಯೇ ವಿಜ್ಞಾನ ಕೂಡ ಅಷ್ಟೇ ಸತ್ಯ. ವಿದ್ಯಾರ್ಥಿಗಳು ವಿಜ್ಞಾನದ ಕಡೆಗೆ ಹೆಚ್ಚಿನ ಗಮನ ನೀಡಿ ವಿವಿಧ ಸಂಶೋಧನೆಗಳನ್ನು ಮಾಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಟಾರ್ ಲೈನ್ ವಿದ್ಯಾಸಂಸ್ಥೆಯ ಸಂಚಾಲಕರಾದ ಜನಾಬ್ ಸೈಯದ್ ಹಬೀಬ್ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಶಿಕ್ಷಣ ಸಂಯೋಜಕರು / ವಿಜ್ಞಾನ ಸ್ಪರ್ಧೆಗಳ ನೊಡೆಲ್ ಆಗಿರುವ ಸಿದ್ದಲಿಂಗ ಸ್ವಾಮಿ ಡಿ.ಎಸ್, ಬೆಳ್ತಂಗಡಿ ವಲಯ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಎಮ್, ಬಂಗಾಡಿ ವಲಯ ಶಿಕ್ಷಣ ಸಂಯೋಜಕರಾದ ರಮೇಶ್ ಎಮ್, ತಾಲೂಕು ವಿಜ್ಞಾನ ವಿಷಯ ವೇದಿಕೆ ಇದರ ಅಧ್ಯಕ್ಷರು ಹಾಗೂ ತಾಲೂಕು ಪ್ರಾಥಮಿಕ ಸಹ ಶಿಕ್ಷಕ ಸಂಘದ ಅಧ್ಯಕ್ಷರಾಗಿರುವ ರಾಧಾಕೃಷ್ಣ ಟಿ, ಸಮನ್ವಯಾಧಿಕಾರಿಯಾದ ಮೋಹನ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ವಿಜ್ಞಾನ ವಿಷಯ ಸ್ಪರ್ಧೆಗಳ ತೀರ್ಪುಗಾರರಾದ ನಿರಂಜನ್, ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಸೈಯದ್ ಆಯ್ಯುಬ್ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ತಮ್ಮ ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಬೆಳ್ತಂಗಡಿ ವಲಯ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಧನ್ಯವಾದವಿತ್ತರು. ಶಾಲಾ ಸಹ ಶಿಕ್ಷಕಿ ಶ್ರೀಮತಿ ಯಶಸ್ವಿನಿ ಕಾರ್ಯಕ್ರಮವನ್ನು ನಿರೂಪಿಸಿದರು. ತಾಲೂಕಿನ ವಿವಿಧ ಪ್ರೌಢಶಾಲೆಗಳಿಂದ ಬಂದಿರುವ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಚಾರಾಗೋಷ್ಠಿ ಸ್ಪರ್ಧೆ ಮತ್ತು ವಿಜ್ಞಾನ ನಾಟಕ ಸ್ಪರ್ಧೆಗಳು ನಡೆದವು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya
error: Content is protected !!