June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

ಬೆಳ್ತಂಗಡಿ : ಲಾಯಿಲ ಗ್ರಾಮದ ಕಾಶಿಬೆಟ್ಟುವಿನ ಶ್ರೀಮತಿ ಮಲ್ಲಿಕಾರವರ ಮಗ ರಂಜಿತ್ ಕುಮಾರ್ ಆರ್ ಇವರು, ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಸೈಂಟಿಫಿಕ್ ರಿಸರ್ಚ್ ಬೆಂಗಳೂರು ಇಲ್ಲಿ, ಡಾ. ಸುಜಿತ್ ಸರ್ಕಾರ್ ಅವರ ಮಾರ್ಗದರ್ಶನದಲ್ಲಿ, ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ನಿಂದ ಪಿಹೆಚ್ ಡಿ ಪದವಿಯನ್ನು ಪಡೆದಿರುತ್ತಾರೆ.

ಇವರು ಸಂತ ತೆರೇಸಾ ಪ್ರೌಢಶಾಲೆ, ವಾಣಿ ಪದವಿ ಪೂರ್ವ ಕಾಲೇಜು ಹಾಗೂ ಉಜಿರೆ ಎಸ್.ಡಿ.ಎಮ್ ಕಾಲೇಜಿನ ಹಳೆ ವಿದ್ಯಾರ್ಥಿ.

ಸಂಶೋಧನಾ ಅವಧಿಯಲ್ಲಿ 15 ಸಂಶೋಧನಾ ಲೇಖನಗಳು ಅಂತರರಾಷ್ಟ್ರೀಯ ಪತ್ರಿಕೆಗಳಲ್ಲಿ ಪ್ರಕಟವಾಗಿರುತ್ತದೆ.
ಸಂಶೋಧನೆ ಆಧಾರಿತವಾಗಿ ರಾಷ್ಟ್ರೀಯ ಮಟ್ಟದ ಡಾ. ಕೆ.ವಿ ರಾವ್ ಸೈಂಟಿಫಿಕ್ ಸೊಸೈಟಿಯವರು ಪ್ರತಿ ವರ್ಷ ಕೊಡಲ್ಪಡುವ “ಅತ್ಯುತ್ತಮ ಸಂಶೋಧನಾ ಪ್ರಶಸ್ತಿ ” 2023 ರಲ್ಲಿ ಪಡೆದಿರುತ್ತಾರೆ. ಕೇಂದ್ರ ಸರಕಾರದ, ಡಿಪಾರ್ಟ್ಮೆಂಟ್ ಆಫ್ ಸೈನ್ಸ್ & ಟೆಕ್ನಾಲಜಿಯಿಂದ, “ಕ್ಲಿಷ್ಟವಾದ ಸಂಶೋಧನಾ ವಿಷಯಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ ಅರ್ಥವಾಗುವಂತೆ ಮಾಡುವುದು” ಎಂಬ ವಿಷಯದ ಬಗ್ಗೆ ಬರೆದ ಲೇಖನಕ್ಕೆ “ಬೆಸ್ಟ್ ಸೈನ್ಸ್ ಸ್ಟೋರಿ ಅವಾರ್ಡ್” ಪಡೆದುಕೊಂಡಿರುತ್ತಾರೆ.

Related posts

ಗಂಡಿಬಾಗಿಲು ಸಿಯೋನ್ ಆಶ್ರಮ : ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳಲಿರುವ ಬಂದಾರು ಕೆ ತೇಜಸ್ವಿನಿ ಪೂಜಾರಿ ರವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಆರ್ಥಿಕ ನೆರವು

Suddi Udaya

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ಮಾಲಾಡಿ ಗ್ರಾಮ ಸಭೆ: ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕಲ್ಮಂಜ ಸ್ಕಂದ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya
error: Content is protected !!