22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

ಬೆಳ್ತಂಗಡಿ : ಲಾಯಿಲ ಗ್ರಾಮದ ಕಾಶಿಬೆಟ್ಟುವಿನ ಶ್ರೀಮತಿ ಮಲ್ಲಿಕಾರವರ ಮಗ ರಂಜಿತ್ ಕುಮಾರ್ ಆರ್ ಇವರು, ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಸೈಂಟಿಫಿಕ್ ರಿಸರ್ಚ್ ಬೆಂಗಳೂರು ಇಲ್ಲಿ, ಡಾ. ಸುಜಿತ್ ಸರ್ಕಾರ್ ಅವರ ಮಾರ್ಗದರ್ಶನದಲ್ಲಿ, ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ನಿಂದ ಪಿಹೆಚ್ ಡಿ ಪದವಿಯನ್ನು ಪಡೆದಿರುತ್ತಾರೆ.

ಇವರು ಸಂತ ತೆರೇಸಾ ಪ್ರೌಢಶಾಲೆ, ವಾಣಿ ಪದವಿ ಪೂರ್ವ ಕಾಲೇಜು ಹಾಗೂ ಉಜಿರೆ ಎಸ್.ಡಿ.ಎಮ್ ಕಾಲೇಜಿನ ಹಳೆ ವಿದ್ಯಾರ್ಥಿ.

ಸಂಶೋಧನಾ ಅವಧಿಯಲ್ಲಿ 15 ಸಂಶೋಧನಾ ಲೇಖನಗಳು ಅಂತರರಾಷ್ಟ್ರೀಯ ಪತ್ರಿಕೆಗಳಲ್ಲಿ ಪ್ರಕಟವಾಗಿರುತ್ತದೆ.
ಸಂಶೋಧನೆ ಆಧಾರಿತವಾಗಿ ರಾಷ್ಟ್ರೀಯ ಮಟ್ಟದ ಡಾ. ಕೆ.ವಿ ರಾವ್ ಸೈಂಟಿಫಿಕ್ ಸೊಸೈಟಿಯವರು ಪ್ರತಿ ವರ್ಷ ಕೊಡಲ್ಪಡುವ “ಅತ್ಯುತ್ತಮ ಸಂಶೋಧನಾ ಪ್ರಶಸ್ತಿ ” 2023 ರಲ್ಲಿ ಪಡೆದಿರುತ್ತಾರೆ. ಕೇಂದ್ರ ಸರಕಾರದ, ಡಿಪಾರ್ಟ್ಮೆಂಟ್ ಆಫ್ ಸೈನ್ಸ್ & ಟೆಕ್ನಾಲಜಿಯಿಂದ, “ಕ್ಲಿಷ್ಟವಾದ ಸಂಶೋಧನಾ ವಿಷಯಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ ಅರ್ಥವಾಗುವಂತೆ ಮಾಡುವುದು” ಎಂಬ ವಿಷಯದ ಬಗ್ಗೆ ಬರೆದ ಲೇಖನಕ್ಕೆ “ಬೆಸ್ಟ್ ಸೈನ್ಸ್ ಸ್ಟೋರಿ ಅವಾರ್ಡ್” ಪಡೆದುಕೊಂಡಿರುತ್ತಾರೆ.

Related posts

ಉಜಿರೆಯಲ್ಲಿ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಯೂಮ್ ಸೆಂಟರ್ ಪ್ರಾರಂಭೋತ್ಸವ ಡ್ಯಾನ್ಸ್ ತರಭೇತಿ ಪಡೆಯುವವರಿಗೆ ತ್ರಿಲೋಕ್ ಉತ್ತಮ ವೇದಿಕೆ- ಸುಧೀರ್ ಜೈನ್

Suddi Udaya

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಏ.18: ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಮಂದಾರ ಸಂಭ್ರಮ-2026

Suddi Udaya

ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಭಜನಾ ಕಾರ್ಯಕ್ರಮ

Suddi Udaya
error: Content is protected !!