September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

ಬೆಳ್ತಂಗಡಿ : ಲಾಯಿಲ ಗ್ರಾಮದ ಕಾಶಿಬೆಟ್ಟುವಿನ ಶ್ರೀಮತಿ ಮಲ್ಲಿಕಾರವರ ಮಗ ರಂಜಿತ್ ಕುಮಾರ್ ಆರ್ ಇವರು, ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಸೈಂಟಿಫಿಕ್ ರಿಸರ್ಚ್ ಬೆಂಗಳೂರು ಇಲ್ಲಿ, ಡಾ. ಸುಜಿತ್ ಸರ್ಕಾರ್ ಅವರ ಮಾರ್ಗದರ್ಶನದಲ್ಲಿ, ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ನಿಂದ ಪಿಹೆಚ್ ಡಿ ಪದವಿಯನ್ನು ಪಡೆದಿರುತ್ತಾರೆ.

ಇವರು ಸಂತ ತೆರೇಸಾ ಪ್ರೌಢಶಾಲೆ, ವಾಣಿ ಪದವಿ ಪೂರ್ವ ಕಾಲೇಜು ಹಾಗೂ ಉಜಿರೆ ಎಸ್.ಡಿ.ಎಮ್ ಕಾಲೇಜಿನ ಹಳೆ ವಿದ್ಯಾರ್ಥಿ.

ಸಂಶೋಧನಾ ಅವಧಿಯಲ್ಲಿ 15 ಸಂಶೋಧನಾ ಲೇಖನಗಳು ಅಂತರರಾಷ್ಟ್ರೀಯ ಪತ್ರಿಕೆಗಳಲ್ಲಿ ಪ್ರಕಟವಾಗಿರುತ್ತದೆ.
ಸಂಶೋಧನೆ ಆಧಾರಿತವಾಗಿ ರಾಷ್ಟ್ರೀಯ ಮಟ್ಟದ ಡಾ. ಕೆ.ವಿ ರಾವ್ ಸೈಂಟಿಫಿಕ್ ಸೊಸೈಟಿಯವರು ಪ್ರತಿ ವರ್ಷ ಕೊಡಲ್ಪಡುವ “ಅತ್ಯುತ್ತಮ ಸಂಶೋಧನಾ ಪ್ರಶಸ್ತಿ ” 2023 ರಲ್ಲಿ ಪಡೆದಿರುತ್ತಾರೆ. ಕೇಂದ್ರ ಸರಕಾರದ, ಡಿಪಾರ್ಟ್ಮೆಂಟ್ ಆಫ್ ಸೈನ್ಸ್ & ಟೆಕ್ನಾಲಜಿಯಿಂದ, “ಕ್ಲಿಷ್ಟವಾದ ಸಂಶೋಧನಾ ವಿಷಯಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ ಅರ್ಥವಾಗುವಂತೆ ಮಾಡುವುದು” ಎಂಬ ವಿಷಯದ ಬಗ್ಗೆ ಬರೆದ ಲೇಖನಕ್ಕೆ “ಬೆಸ್ಟ್ ಸೈನ್ಸ್ ಸ್ಟೋರಿ ಅವಾರ್ಡ್” ಪಡೆದುಕೊಂಡಿರುತ್ತಾರೆ.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಆಮಂತ್ರಣ ವೇದಿಕೆ ಜಿಲ್ಲಾ ಅಧ್ಯಕ್ಷರಾಗಿ ವಿಂಧ್ಯಾ ಎಸ್.ರೈ ಮತ್ತು ಉಪಾಧ್ಯಕ್ಷರಾಗಿ ಅನಿತಾ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ: ಡಾ. ಬಿ.ಆರ್‌. ಅಂಬೇಡ್ಕರ್‌ ಹುಟ್ಟುಹಬ್ಬ ಕಾರ್ಯಕ್ರಮ

Suddi Udaya
error: Content is protected !!