ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಸೆ.12 ರಂದು ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆಯನ್ನು ಹಮ್ಮಿಕೊಳ್ಳಲಾಗಿತ್ತು.

‘ನಿರಂತರ’ ಪ್ರಕಾಶನ ಈ ಕೃತಿಯನ್ನು ಪ್ರಕಟಿಸಿದೆ.

ಹಿರಿಯ ಸಾಹಿತಿ ಜೋಗಿ ಕೃತಿ ಬಿಡುಗಡೆ ಮಾಡಿದರು. ಜಿ ಎನ್ ಮೋಹನ್ ಕೃತಿ ಕುರಿತು ಮಾತನಾಡಿದರು. ಕನ್ನಡ ಚಳವಳಿಯ ಹಿರಿಯರಾದ ರಾ ನಂ ಚಂದ್ರಶೇಖರ್ ಅವರು ಅಧ್ಯಕ್ಷತೆ ವಹಿಸಿದ್ದರು.

ಸಪ್ನ ಪುಸ್ತಕ ಮಳಿಗೆಯ ಕನ್ನಡ ವಿಭಾಗದ ಮುಖ್ಯಸ್ಥರಾದ ಆರ್ ದೊಡ್ಡೆಗೌಡ ಅವರು ಕಾರ್ಯಕ್ರಮ ನಿರ್ವಹಿಸಿದರು.

ಲೇಖಕಿ ಪದ್ಮಲತಾ ಮೋಹನ್ ನಿಡ್ಲೆ ಅವರು ಮಾತನಾಡಿದರು. ಪ್ರಕಾಶಕರಾದ ಚಂದ್ರಕೀರ್ತಿ ಉಪಸ್ಥಿತರಿದ್ದರು.

Leave a Comment

error: Content is protected !!