25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶಿಕ್ಷಕರ ದಿನಾಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ|ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಧನಾತ್ಮಕ ಪ್ರಭಾವವನ್ನು ಬೀರುವರು. ವಿದ್ಯಾರ್ಥಿಗಳಿಗಾಗಿ ಶಿಕ್ಷಕರು ಸದಾ ಜ್ಞಾನಾಭಿವೃದ್ಧಿಯನ್ನು ಮಾಡುತ್ತಲೇ ಇರುತ್ತಾರೆ. ವಿದ್ಯಾರ್ಥಿಗಳ ಸರಿ ತಪ್ಪುಗಳನ್ನು ಬೇರ್ಪಡಿಸಿ ಸನ್ಮಾರ್ಗದ ದಾರಿಗೆ ಕೊಂಡೊಯ್ಯುವವರು ಶಿಕ್ಷಕರು. ಗುರುಗಳ ಮಾತನ್ನು ಪಾಲಿಸಿದರೆ ಸಾಧನೆಯೆಡೆಗೆ ಹೋಗಲು ಸಾಧ್ಯ ಎಂದು ಅವರು ಹೇಳಿದರು. ಕಾಲೇಜಿನಪ್ರಾಂಶುಪಾಲರಾದ ವಂ| ಜೆರೊಮ್ ಡಿಸೋಜ ಶಿಕ್ಷಕರ ಮಹತ್ವದ ಕುರಿತು ಮಾತನಾಡಿದರು.


ಉಪನ್ಯಾಸಕಿ ಲೆಜ್ವಿನ್ ಜೆಶಲ್ ಶಿಕ್ಷಕರ-ವಿದ್ಯಾರ್ಥಿಗಳ ಬಾಂಧವ್ಯದ ಕುರಿತು ಮಾತನಾಡಿದರು. ವಿದ್ಯಾರ್ಥಿನಿ ಆಂಕಿತ ಗುರು ವಂದನೆಯನ್ನು ಸಲ್ಲಿಸಿದರು. ಮಹಮ್ಮದ್ ಇಸಾಕ್ ಸ್ವಾಗತಿಸಿ,ಸೌರವ್ ವಂದಿಸಿದರು , ಜೊಹನ್, ಮೌಶಿನಾ ಕಾರ್ಯಕ್ರಮ ನಿರೂಪಿಸಿದರು.ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಉಪನ್ಯಾಸಕ ನಂದಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ನಿಧನ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರದಲ್ಲಿ ಶಾರದಾ ಪೂಜೆ, ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ವಿಚಾರಣೆಗೆ ಬರಲು ಪೊಲೀಸರು ನೋಟಿಸು ನೀಡಿಲ್ಲ: ಶಾಸಕರಿಗೆ ಗೃಹ ಬಂಧನದಂತೆ ಪೊಲೀಸರು ಮಾಡಿದ್ದಾರೆ

Suddi Udaya
error: Content is protected !!