25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿ ಮುಂಡಾಜೆ ಕಾರ್ಯಕ್ಷೇತ್ರದ ನಂದಿನಿ ಜ್ಞಾನವಿಕಾಸ ಕೇಂದ್ರದಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರವನ್ನು ಮುಂಡಾಜೆ ಗ್ರಾಮಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಜನಜಾಗೃತಿ ವಲಯಾಧ್ಯಕ್ಷ ನಾಮದೇವ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ರುಡ್ ಸೆಟ್ ಸಂಸ್ಥೆಯ ಪ್ರವೀಣ್ ರವರು ಸ್ವಉದ್ಯೋಗ ಪ್ರಾರಂಭಿಸುವ ಮುನ್ನ ಅನುಸರಿಸಬೇಕಾದ ಪೂರ್ವ ತಯಾರಿಗಳಾದ ಸ್ಥಳದ ಆಯ್ಕೆ, ಪಡೆಯಬೇಕಾದ ಲೈಸೆನ್ಸ್, ಬಂಡವಾಳ, ಮಾರ್ಕೆಟಿಂಗ್ ಬಗ್ಗೆ ವಿವರವಾಗಿ ತಿಳಿಸಿದರು. ಸ್ವಉದ್ಯೋಗ ಮಾಡಬಹುದಾದಂತಹ ಬತ್ತಿ ತಯಾರಿ, ಹಾಳೆ ತಟ್ಟೆ ಘಟಕ, ಅಗರಬತ್ತಿ ತಯಾರಿ, ಅಣಬೆ ಕೃಷಿ, ಜೈವಿಕ ಗೊಬ್ಬರ ತಯಾರಿ, ಟೈಲರಿಂಗ್ , ಬ್ಯೂಟೀಷಿಯನ್ ,ನರ್ಸರಿ ,ಜೇನುಕೃಷಿ, ಹೈನುಗಾರಿಕೆ ,ಕೋಳಿಸಾಕಣೆ, ಮಸಾಲೆ ಪೌಡರ್ ತಯಾರಿ, ವ್ಯಾಪಾರ ಮಾಡುವ ಬಗ್ಗೆ ಪ್ರೇರಣೆ ನೀಡಿದರು.

ಗ್ರಾಮಪಂಚಾಯತ್ ಅಧ್ಯಕ್ಷರಾದ ಗಣೇಶ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಮಧುರಾ ಮತ್ತು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಗ್ರಾ.ಪ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಪುದುವೆಟ್ಟು : ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya
error: Content is protected !!