April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿ ಮುಂಡಾಜೆ ಕಾರ್ಯಕ್ಷೇತ್ರದ ನಂದಿನಿ ಜ್ಞಾನವಿಕಾಸ ಕೇಂದ್ರದಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರವನ್ನು ಮುಂಡಾಜೆ ಗ್ರಾಮಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಜನಜಾಗೃತಿ ವಲಯಾಧ್ಯಕ್ಷ ನಾಮದೇವ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ರುಡ್ ಸೆಟ್ ಸಂಸ್ಥೆಯ ಪ್ರವೀಣ್ ರವರು ಸ್ವಉದ್ಯೋಗ ಪ್ರಾರಂಭಿಸುವ ಮುನ್ನ ಅನುಸರಿಸಬೇಕಾದ ಪೂರ್ವ ತಯಾರಿಗಳಾದ ಸ್ಥಳದ ಆಯ್ಕೆ, ಪಡೆಯಬೇಕಾದ ಲೈಸೆನ್ಸ್, ಬಂಡವಾಳ, ಮಾರ್ಕೆಟಿಂಗ್ ಬಗ್ಗೆ ವಿವರವಾಗಿ ತಿಳಿಸಿದರು. ಸ್ವಉದ್ಯೋಗ ಮಾಡಬಹುದಾದಂತಹ ಬತ್ತಿ ತಯಾರಿ, ಹಾಳೆ ತಟ್ಟೆ ಘಟಕ, ಅಗರಬತ್ತಿ ತಯಾರಿ, ಅಣಬೆ ಕೃಷಿ, ಜೈವಿಕ ಗೊಬ್ಬರ ತಯಾರಿ, ಟೈಲರಿಂಗ್ , ಬ್ಯೂಟೀಷಿಯನ್ ,ನರ್ಸರಿ ,ಜೇನುಕೃಷಿ, ಹೈನುಗಾರಿಕೆ ,ಕೋಳಿಸಾಕಣೆ, ಮಸಾಲೆ ಪೌಡರ್ ತಯಾರಿ, ವ್ಯಾಪಾರ ಮಾಡುವ ಬಗ್ಗೆ ಪ್ರೇರಣೆ ನೀಡಿದರು.

ಗ್ರಾಮಪಂಚಾಯತ್ ಅಧ್ಯಕ್ಷರಾದ ಗಣೇಶ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಮಧುರಾ ಮತ್ತು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya
error: Content is protected !!