25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿ ಮುಂಡಾಜೆ ಕಾರ್ಯಕ್ಷೇತ್ರದ ನಂದಿನಿ ಜ್ಞಾನವಿಕಾಸ ಕೇಂದ್ರದಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರವನ್ನು ಮುಂಡಾಜೆ ಗ್ರಾಮಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಜನಜಾಗೃತಿ ವಲಯಾಧ್ಯಕ್ಷ ನಾಮದೇವ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ರುಡ್ ಸೆಟ್ ಸಂಸ್ಥೆಯ ಪ್ರವೀಣ್ ರವರು ಸ್ವಉದ್ಯೋಗ ಪ್ರಾರಂಭಿಸುವ ಮುನ್ನ ಅನುಸರಿಸಬೇಕಾದ ಪೂರ್ವ ತಯಾರಿಗಳಾದ ಸ್ಥಳದ ಆಯ್ಕೆ, ಪಡೆಯಬೇಕಾದ ಲೈಸೆನ್ಸ್, ಬಂಡವಾಳ, ಮಾರ್ಕೆಟಿಂಗ್ ಬಗ್ಗೆ ವಿವರವಾಗಿ ತಿಳಿಸಿದರು. ಸ್ವಉದ್ಯೋಗ ಮಾಡಬಹುದಾದಂತಹ ಬತ್ತಿ ತಯಾರಿ, ಹಾಳೆ ತಟ್ಟೆ ಘಟಕ, ಅಗರಬತ್ತಿ ತಯಾರಿ, ಅಣಬೆ ಕೃಷಿ, ಜೈವಿಕ ಗೊಬ್ಬರ ತಯಾರಿ, ಟೈಲರಿಂಗ್ , ಬ್ಯೂಟೀಷಿಯನ್ ,ನರ್ಸರಿ ,ಜೇನುಕೃಷಿ, ಹೈನುಗಾರಿಕೆ ,ಕೋಳಿಸಾಕಣೆ, ಮಸಾಲೆ ಪೌಡರ್ ತಯಾರಿ, ವ್ಯಾಪಾರ ಮಾಡುವ ಬಗ್ಗೆ ಪ್ರೇರಣೆ ನೀಡಿದರು.

ಗ್ರಾಮಪಂಚಾಯತ್ ಅಧ್ಯಕ್ಷರಾದ ಗಣೇಶ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಮಧುರಾ ಮತ್ತು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಶೀಲಾವತಿ ನಿಧನ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

Suddi Udaya

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಸಿಎ ವಿಭಾಗದಿಂದ ಎನಿಗ್ಮಾ- 2024

Suddi Udaya
error: Content is protected !!