24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿ ಮುಂಡಾಜೆ ಕಾರ್ಯಕ್ಷೇತ್ರದ ನಂದಿನಿ ಜ್ಞಾನವಿಕಾಸ ಕೇಂದ್ರದಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರವನ್ನು ಮುಂಡಾಜೆ ಗ್ರಾಮಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಜನಜಾಗೃತಿ ವಲಯಾಧ್ಯಕ್ಷ ನಾಮದೇವ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ರುಡ್ ಸೆಟ್ ಸಂಸ್ಥೆಯ ಪ್ರವೀಣ್ ರವರು ಸ್ವಉದ್ಯೋಗ ಪ್ರಾರಂಭಿಸುವ ಮುನ್ನ ಅನುಸರಿಸಬೇಕಾದ ಪೂರ್ವ ತಯಾರಿಗಳಾದ ಸ್ಥಳದ ಆಯ್ಕೆ, ಪಡೆಯಬೇಕಾದ ಲೈಸೆನ್ಸ್, ಬಂಡವಾಳ, ಮಾರ್ಕೆಟಿಂಗ್ ಬಗ್ಗೆ ವಿವರವಾಗಿ ತಿಳಿಸಿದರು. ಸ್ವಉದ್ಯೋಗ ಮಾಡಬಹುದಾದಂತಹ ಬತ್ತಿ ತಯಾರಿ, ಹಾಳೆ ತಟ್ಟೆ ಘಟಕ, ಅಗರಬತ್ತಿ ತಯಾರಿ, ಅಣಬೆ ಕೃಷಿ, ಜೈವಿಕ ಗೊಬ್ಬರ ತಯಾರಿ, ಟೈಲರಿಂಗ್ , ಬ್ಯೂಟೀಷಿಯನ್ ,ನರ್ಸರಿ ,ಜೇನುಕೃಷಿ, ಹೈನುಗಾರಿಕೆ ,ಕೋಳಿಸಾಕಣೆ, ಮಸಾಲೆ ಪೌಡರ್ ತಯಾರಿ, ವ್ಯಾಪಾರ ಮಾಡುವ ಬಗ್ಗೆ ಪ್ರೇರಣೆ ನೀಡಿದರು.

ಗ್ರಾಮಪಂಚಾಯತ್ ಅಧ್ಯಕ್ಷರಾದ ಗಣೇಶ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಮಧುರಾ ಮತ್ತು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ: ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು

Suddi Udaya

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

Suddi Udaya

ಹಾಸನದ ಆಟೋಚಾಲಕನ ಕೊಲೆ ಮಾಡಿ ಶಿರಾಡಿ ಘಾಟ್ ನಲ್ಲಿ ಶವ ಬಿಸಾಕಿದ ಹಂತಕರು: ಧರ್ಮಸ್ಥಳ ನೇತ್ರಾವತಿ‌ ನದಿಯಲ್ಲಿ ಬಟ್ಟೆಗಳನ್ನು ಎಸೆದು ಪರಾರಿ

Suddi Udaya

ವೇಣೂರು: ಮಹಾವೀರ ನಗರದ ನಿವಾಸಿ ವಿಜಯಮ್ಮ ನಿಧನ

Suddi Udaya
error: Content is protected !!