38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ಸೆ.10ರಂದು ಮೇಲಂತಬೆಟ್ಟು ಶಾಲಾ ಮೈದಾನದಲ್ಲಿ ನಡೆಯಿತು.


ಎಸ್‌ಕೆಡಿಆರ್‌ಡಿಪಿ ಪ್ರಾದೇಶಿಕ ನಿರ್ದೇಶಕ ಜಯಶಂಕರ ಶರ್ಮಾ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕೃಷಿಕ ಯುವಕ ಮಂಡಲದ ಅಧ್ಯಕ್ಷ ಜಗದೀಶ್ ಬರಮೇಲು ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಕೃಷಿಕ ಯುವಕ ಮಂಡಲದ ಗೌರವಾಧ್ಯಕ್ಷ ಧರ್ಣಪ್ಪ ಬಂಗೇರ, ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಸವಿತಾ, ಸ್ಪೂರ್ತಿ ಮಹಿಳಾ ಮಂಡಲದ ಅಧ್ಯಕ್ಷೆ ಜೆಸಿಂತಾ ಮೋನಿಸ್, ಗಿರೀಶ್ ಕುಮಾರ್ ಭಾಗವಹಿಸಿದ್ದರು.
ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಧರ್ಮದರ್ಶಿಗಳಾದ ಯೋಗೀಶ್ ಕುಮಾರ್, ಶೈಲೇಶ್ ಕುಮಾರ್ ಕುರ್ತೋಡಿ ಮೊದಲಾದವರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಪುರುಷರಿಗೆ ಕಬಡ್ಡಿ, ವಾಲಿಬಾಲ್, ಹಗ್ಗಜಗ್ಗಾಟ, ಮಲ್ಲಕಂಬ, ಗುಂಡೆಸೆತ, ಮಡಿಕೆ ಒಡೆಯುವುದು, ಮಹಿಳೆಯರಿಗೆ ತ್ರೋಬಾಲ್, ಸಂಗೀತ ಕುರ್ಚಿ, ಹಗ್ಗಜಗ್ಗಾಟ, ಗುಂಡೆಸೆತ, ಮಡಿಕೆ ಒಡೆಯುವುದು, ಮಕ್ಕಳಿಗೆ ಲಿಂಬೆ ಚಮಚ, 100 ಮೀ ಓಟ, ಗೋಣಿಚೀಲ ಓಟ, ಲಕ್ಕಿಗೇಮ್, ಕಬಡ್ಡಿ ಮೊದಲಾದ ಸ್ಪರ್ಧೆಗಳು ನಡೆಯಿತು. ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ಧೆ ಮತ್ತು ಭಕ್ತಿಗೀತೆ ಸ್ಪರ್ಧೆ ನಡೆಸಲಾಯಿತು.

Related posts

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Suddi Udaya

ನಾಳೆ (ಅ.30): ವಿದ್ಯುತ್ ನಿಲುಗಡೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

Suddi Udaya
error: Content is protected !!