25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ಸೆ.10ರಂದು ಮೇಲಂತಬೆಟ್ಟು ಶಾಲಾ ಮೈದಾನದಲ್ಲಿ ನಡೆಯಿತು.


ಎಸ್‌ಕೆಡಿಆರ್‌ಡಿಪಿ ಪ್ರಾದೇಶಿಕ ನಿರ್ದೇಶಕ ಜಯಶಂಕರ ಶರ್ಮಾ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕೃಷಿಕ ಯುವಕ ಮಂಡಲದ ಅಧ್ಯಕ್ಷ ಜಗದೀಶ್ ಬರಮೇಲು ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಕೃಷಿಕ ಯುವಕ ಮಂಡಲದ ಗೌರವಾಧ್ಯಕ್ಷ ಧರ್ಣಪ್ಪ ಬಂಗೇರ, ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಸವಿತಾ, ಸ್ಪೂರ್ತಿ ಮಹಿಳಾ ಮಂಡಲದ ಅಧ್ಯಕ್ಷೆ ಜೆಸಿಂತಾ ಮೋನಿಸ್, ಗಿರೀಶ್ ಕುಮಾರ್ ಭಾಗವಹಿಸಿದ್ದರು.
ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಧರ್ಮದರ್ಶಿಗಳಾದ ಯೋಗೀಶ್ ಕುಮಾರ್, ಶೈಲೇಶ್ ಕುಮಾರ್ ಕುರ್ತೋಡಿ ಮೊದಲಾದವರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಪುರುಷರಿಗೆ ಕಬಡ್ಡಿ, ವಾಲಿಬಾಲ್, ಹಗ್ಗಜಗ್ಗಾಟ, ಮಲ್ಲಕಂಬ, ಗುಂಡೆಸೆತ, ಮಡಿಕೆ ಒಡೆಯುವುದು, ಮಹಿಳೆಯರಿಗೆ ತ್ರೋಬಾಲ್, ಸಂಗೀತ ಕುರ್ಚಿ, ಹಗ್ಗಜಗ್ಗಾಟ, ಗುಂಡೆಸೆತ, ಮಡಿಕೆ ಒಡೆಯುವುದು, ಮಕ್ಕಳಿಗೆ ಲಿಂಬೆ ಚಮಚ, 100 ಮೀ ಓಟ, ಗೋಣಿಚೀಲ ಓಟ, ಲಕ್ಕಿಗೇಮ್, ಕಬಡ್ಡಿ ಮೊದಲಾದ ಸ್ಪರ್ಧೆಗಳು ನಡೆಯಿತು. ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ಧೆ ಮತ್ತು ಭಕ್ತಿಗೀತೆ ಸ್ಪರ್ಧೆ ನಡೆಸಲಾಯಿತು.

Related posts

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya

ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ

Suddi Udaya

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಡಾ. ಕುಮಾರ ಹೆಗ್ಡೆ ರವರಿಗೆ ಪ್ರತಿಷ್ಠಿತ ಜೇಸಿಯ ಉದ್ಯೋಗ ರತ್ನ ಪ್ರಶಸ್ತಿ

Suddi Udaya

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

Suddi Udaya
error: Content is protected !!