25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

ಬೆಳ್ತಂಗಡಿ : ಲಾಯಿಲ ಗ್ರಾಮದ ಕಾಶಿಬೆಟ್ಟುವಿನ ಶ್ರೀಮತಿ ಮಲ್ಲಿಕಾರವರ ಮಗ ರಂಜಿತ್ ಕುಮಾರ್ ಆರ್ ಇವರು, ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಸೈಂಟಿಫಿಕ್ ರಿಸರ್ಚ್ ಬೆಂಗಳೂರು ಇಲ್ಲಿ, ಡಾ. ಸುಜಿತ್ ಸರ್ಕಾರ್ ಅವರ ಮಾರ್ಗದರ್ಶನದಲ್ಲಿ, ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ನಿಂದ ಪಿಹೆಚ್ ಡಿ ಪದವಿಯನ್ನು ಪಡೆದಿರುತ್ತಾರೆ.

ಇವರು ಸಂತ ತೆರೇಸಾ ಪ್ರೌಢಶಾಲೆ, ವಾಣಿ ಪದವಿ ಪೂರ್ವ ಕಾಲೇಜು ಹಾಗೂ ಉಜಿರೆ ಎಸ್.ಡಿ.ಎಮ್ ಕಾಲೇಜಿನ ಹಳೆ ವಿದ್ಯಾರ್ಥಿ.

ಸಂಶೋಧನಾ ಅವಧಿಯಲ್ಲಿ 15 ಸಂಶೋಧನಾ ಲೇಖನಗಳು ಅಂತರರಾಷ್ಟ್ರೀಯ ಪತ್ರಿಕೆಗಳಲ್ಲಿ ಪ್ರಕಟವಾಗಿರುತ್ತದೆ.
ಸಂಶೋಧನೆ ಆಧಾರಿತವಾಗಿ ರಾಷ್ಟ್ರೀಯ ಮಟ್ಟದ ಡಾ. ಕೆ.ವಿ ರಾವ್ ಸೈಂಟಿಫಿಕ್ ಸೊಸೈಟಿಯವರು ಪ್ರತಿ ವರ್ಷ ಕೊಡಲ್ಪಡುವ “ಅತ್ಯುತ್ತಮ ಸಂಶೋಧನಾ ಪ್ರಶಸ್ತಿ ” 2023 ರಲ್ಲಿ ಪಡೆದಿರುತ್ತಾರೆ. ಕೇಂದ್ರ ಸರಕಾರದ, ಡಿಪಾರ್ಟ್ಮೆಂಟ್ ಆಫ್ ಸೈನ್ಸ್ & ಟೆಕ್ನಾಲಜಿಯಿಂದ, “ಕ್ಲಿಷ್ಟವಾದ ಸಂಶೋಧನಾ ವಿಷಯಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ ಅರ್ಥವಾಗುವಂತೆ ಮಾಡುವುದು” ಎಂಬ ವಿಷಯದ ಬಗ್ಗೆ ಬರೆದ ಲೇಖನಕ್ಕೆ “ಬೆಸ್ಟ್ ಸೈನ್ಸ್ ಸ್ಟೋರಿ ಅವಾರ್ಡ್” ಪಡೆದುಕೊಂಡಿರುತ್ತಾರೆ.

Related posts

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ಚುನಾವಣೆ

Suddi Udaya

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

Suddi Udaya
error: Content is protected !!