30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

ಬೆಳ್ತಂಗಡಿ : ಲಾಯಿಲ ಗ್ರಾಮದ ಕಾಶಿಬೆಟ್ಟುವಿನ ಶ್ರೀಮತಿ ಮಲ್ಲಿಕಾರವರ ಮಗ ರಂಜಿತ್ ಕುಮಾರ್ ಆರ್ ಇವರು, ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಸೈಂಟಿಫಿಕ್ ರಿಸರ್ಚ್ ಬೆಂಗಳೂರು ಇಲ್ಲಿ, ಡಾ. ಸುಜಿತ್ ಸರ್ಕಾರ್ ಅವರ ಮಾರ್ಗದರ್ಶನದಲ್ಲಿ, ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ನಿಂದ ಪಿಹೆಚ್ ಡಿ ಪದವಿಯನ್ನು ಪಡೆದಿರುತ್ತಾರೆ.

ಇವರು ಸಂತ ತೆರೇಸಾ ಪ್ರೌಢಶಾಲೆ, ವಾಣಿ ಪದವಿ ಪೂರ್ವ ಕಾಲೇಜು ಹಾಗೂ ಉಜಿರೆ ಎಸ್.ಡಿ.ಎಮ್ ಕಾಲೇಜಿನ ಹಳೆ ವಿದ್ಯಾರ್ಥಿ.

ಸಂಶೋಧನಾ ಅವಧಿಯಲ್ಲಿ 15 ಸಂಶೋಧನಾ ಲೇಖನಗಳು ಅಂತರರಾಷ್ಟ್ರೀಯ ಪತ್ರಿಕೆಗಳಲ್ಲಿ ಪ್ರಕಟವಾಗಿರುತ್ತದೆ.
ಸಂಶೋಧನೆ ಆಧಾರಿತವಾಗಿ ರಾಷ್ಟ್ರೀಯ ಮಟ್ಟದ ಡಾ. ಕೆ.ವಿ ರಾವ್ ಸೈಂಟಿಫಿಕ್ ಸೊಸೈಟಿಯವರು ಪ್ರತಿ ವರ್ಷ ಕೊಡಲ್ಪಡುವ “ಅತ್ಯುತ್ತಮ ಸಂಶೋಧನಾ ಪ್ರಶಸ್ತಿ ” 2023 ರಲ್ಲಿ ಪಡೆದಿರುತ್ತಾರೆ. ಕೇಂದ್ರ ಸರಕಾರದ, ಡಿಪಾರ್ಟ್ಮೆಂಟ್ ಆಫ್ ಸೈನ್ಸ್ & ಟೆಕ್ನಾಲಜಿಯಿಂದ, “ಕ್ಲಿಷ್ಟವಾದ ಸಂಶೋಧನಾ ವಿಷಯಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ ಅರ್ಥವಾಗುವಂತೆ ಮಾಡುವುದು” ಎಂಬ ವಿಷಯದ ಬಗ್ಗೆ ಬರೆದ ಲೇಖನಕ್ಕೆ “ಬೆಸ್ಟ್ ಸೈನ್ಸ್ ಸ್ಟೋರಿ ಅವಾರ್ಡ್” ಪಡೆದುಕೊಂಡಿರುತ್ತಾರೆ.

Related posts

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ, ಹಲವರಿಗೆ ಗಂಭೀರ ಗಾಯ

Suddi Udaya

ಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ

Suddi Udaya

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya
error: Content is protected !!