24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು  ಸೆ.13ರಂದು ಬೆಳ್ತಂಗಡಿ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಸಭಾಭವನದಲ್ಲಿ ಜರುಗಿತು.

ಸಂಘದ ಅಧ್ಯಕ್ಷರಾದ ಅಜಿತ್ ಆರಿಗರವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ವರ್ಷ ರೂ. 1.43 ಕೋಟಿ ವ್ಯವಹಾರ, ರೂ. 54.22 ಲಕ್ಷ ನಿವ್ವಳ ಲಾಭ ಗಳಿಸಿದ್ದು ಶೇ 12 ಡಿವಿಡೆಂಟ್ ಘೋಷಿಸಿದರು.

ಕಳೆದ ಶೈಕ್ಷಣಿಕ ಸಾಲಿನಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಸಂಘದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು. ಅತಿ ಹೆಚ್ಚು ಪಿಗ್ಮಿ ಸಂಗ್ರಹಕರಾದ ರಾಮದೇವಿ, ಪ್ರೇಮರವರನ್ನು ಹಾಗೂ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತ್ತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಕುಮಾರ್ ವಾರ್ಷಿಕ ವರದಿ ಮಂಡಿಸಿದರು.  ಸಂಘದ ಉಪಾಧ್ಯಕ್ಷೆ ಗಣೇಶ್ ಭಂಡಾರಿ, ನಿರ್ದೇಶಕರುಗಳಾದ ಮುನಿರಾಜ್ ಅಜ್ರಿ, ಪುರಂದರ, ರಾಧಾ, ನಾರಾಯಣ ಆಚಾರ್, ಅಶೋಕ್ ರೈ. ಶ್ರೀನಾಥ್ ಕೆ.ಎಮ್, ತಿಮ್ಮಯ್ಯ ನಾಯ್ಕ, ರಮೇಶ್ ನಲ್ಕೆ, ಹರಿಯಪ್ಪ ನಾಯ್ಕ್, ಪ್ರೇಮ., ಡಿ.ಸಿ.ಸಿ. ಪ್ರತಿನಿಧಿ ಸಂದೇಶ್, ಸಂಘದ ಸದಸ್ಯರು, ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಗಣೇಶ್ ಸ್ವಾಗತಿಸಿ ನಿರ್ದೇಶಕರಾದ ಶ್ರೀನಾಥ್ ಕೆ.ಎಮ್. ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆ ಯಾದ ಸೇಬಾಷ್ಟಿಯನ್ ಪಿ ಸಿ ರವರಿಗೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya
error: Content is protected !!