September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶಿಕ್ಷಕರ ದಿನಾಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ|ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಧನಾತ್ಮಕ ಪ್ರಭಾವವನ್ನು ಬೀರುವರು. ವಿದ್ಯಾರ್ಥಿಗಳಿಗಾಗಿ ಶಿಕ್ಷಕರು ಸದಾ ಜ್ಞಾನಾಭಿವೃದ್ಧಿಯನ್ನು ಮಾಡುತ್ತಲೇ ಇರುತ್ತಾರೆ. ವಿದ್ಯಾರ್ಥಿಗಳ ಸರಿ ತಪ್ಪುಗಳನ್ನು ಬೇರ್ಪಡಿಸಿ ಸನ್ಮಾರ್ಗದ ದಾರಿಗೆ ಕೊಂಡೊಯ್ಯುವವರು ಶಿಕ್ಷಕರು. ಗುರುಗಳ ಮಾತನ್ನು ಪಾಲಿಸಿದರೆ ಸಾಧನೆಯೆಡೆಗೆ ಹೋಗಲು ಸಾಧ್ಯ ಎಂದು ಅವರು ಹೇಳಿದರು. ಕಾಲೇಜಿನಪ್ರಾಂಶುಪಾಲರಾದ ವಂ| ಜೆರೊಮ್ ಡಿಸೋಜ ಶಿಕ್ಷಕರ ಮಹತ್ವದ ಕುರಿತು ಮಾತನಾಡಿದರು.


ಉಪನ್ಯಾಸಕಿ ಲೆಜ್ವಿನ್ ಜೆಶಲ್ ಶಿಕ್ಷಕರ-ವಿದ್ಯಾರ್ಥಿಗಳ ಬಾಂಧವ್ಯದ ಕುರಿತು ಮಾತನಾಡಿದರು. ವಿದ್ಯಾರ್ಥಿನಿ ಆಂಕಿತ ಗುರು ವಂದನೆಯನ್ನು ಸಲ್ಲಿಸಿದರು. ಮಹಮ್ಮದ್ ಇಸಾಕ್ ಸ್ವಾಗತಿಸಿ,ಸೌರವ್ ವಂದಿಸಿದರು , ಜೊಹನ್, ಮೌಶಿನಾ ಕಾರ್ಯಕ್ರಮ ನಿರೂಪಿಸಿದರು.ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಗೇರುಕಟ್ಟೆ :ಪರಪ್ಪು ಜಮಾಅತ್ ನಿಂದ ಅಭಿನಂದನಾ ಸಭೆ: ದರ್ಗಾ ಸುತ್ತಮುತ್ತ ಶಾಶ್ವತ ಕಾಮಗಾರಿ ನಡೆಸಿದ ಮುಸ್ಲಿಮ್ ಯೂತ್ ವಿಂಗ್ ಸಮಿತಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮುಳಿಯ ಸಂಸ್ಥೆಯ ದಿಗ್ದರ್ಶಕರಾದ ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ : ಮುಳಿಯ ಗೋಲ್ಡ್ & ಡೈಮಂಡ್ ಸಂಸ್ಥೆಯ ಎಲ್ಲಾ ಶಾಖೆಗಳಿಗೆ ಆ. 29 ರಂದು ರಜೆ

Suddi Udaya

ಮೊಗ್ರು : ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya
error: Content is protected !!