September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹದ ಅಂಗವಾಗಿ ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಸೆ.14 ರಂದು ವೈಯಕ್ತಿಕ ಸ್ವಚ್ಛತೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಹತ್ಯಡ್ಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಇರುವ ಶಾಲೆತ್ತಡ್ಕ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ
ರೇಖಾ ಅವರು ಮಕ್ಕಳಿಗೆ ಹಲ್ಲು, ಬಾಯಿ ಹಾಗೂ ವೈಯಕ್ತಿಕ ಸ್ವಚ್ಛತೆ ಕುರಿತು ತರಬೇತಿ ನೀಡಿದರು.

ತರಬೇತಿ ವಿಭಾಗದ ಉಪಾಧ್ಯಕ್ಷ ವಿದ್ಯೇಂದ್ರ ಅವರು ಅಧ್ಯಕ್ಷತೆ ವಹಿಸಿದ್ದರು.

ಅಕ್ಷತ್ ರೈ ಜೇಸಿ ವಾಣಿ ವಾಚಿಸಿದರು. ನಿಕಟಪೂರ್ವ ಅಧ್ಯಕ್ಷ ಕೆ. ಶ್ರೀಧರ ರಾವ್ ಅವರು ಅತಿಥಿಗಳನ್ನು ಪರಿಚಯಿಸಿದರು.

ಎಲ್ಲಾ ಮಕ್ಕಳಿಗೂ ಹಲ್ಲು ಉಜ್ಜುವ ಬ್ರಷ್, ಪೇಸ್ಟ್ ವಿತರಿಸಲಾಯಿತು. ಅತಿಥಿ ಹಾಗೂ ಕೇಂದ್ರಕ್ಕೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸಭೆಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ನಿಖಿತಾ, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಸುಜಾತ,
ಜೋಸೆಫ್ ಪಿರೇರಾ, ಸೌಜನ್ಯ, ಯಶೋಧ, ಭಾರತಿ, ದೇವಪ್ಪ ಪೂಜಾರಿ, ಜಯಚಂದ್ರ ಬಲ್ಕಜೆ, ಪಿ.ಟಿ. ಸೆಬಾಸ್ಟಿಯನ್, ಪೋಷಕರು ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಅಂಗನವಾಡಿ ಕೇಂದ್ರದ ಸಹಾಯಕಿ ಶ್ರೀಮತಿ ವಿಜಯಾ ವಂದಿಸಿದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಟಿ ಔಷಧಿಗಳ ಪ್ರಾತ್ಯಕ್ಷಿಕೆ

Suddi Udaya

ಕರಾಟೆ ಸ್ಪರ್ಧೆ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕಾರ್ಮೆಲ್ ಸಜಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

Suddi Udaya

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

Suddi Udaya
error: Content is protected !!