27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹದ ಅಂಗವಾಗಿ ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಸೆ.14 ರಂದು ವೈಯಕ್ತಿಕ ಸ್ವಚ್ಛತೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಹತ್ಯಡ್ಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಇರುವ ಶಾಲೆತ್ತಡ್ಕ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ
ರೇಖಾ ಅವರು ಮಕ್ಕಳಿಗೆ ಹಲ್ಲು, ಬಾಯಿ ಹಾಗೂ ವೈಯಕ್ತಿಕ ಸ್ವಚ್ಛತೆ ಕುರಿತು ತರಬೇತಿ ನೀಡಿದರು.

ತರಬೇತಿ ವಿಭಾಗದ ಉಪಾಧ್ಯಕ್ಷ ವಿದ್ಯೇಂದ್ರ ಅವರು ಅಧ್ಯಕ್ಷತೆ ವಹಿಸಿದ್ದರು.

ಅಕ್ಷತ್ ರೈ ಜೇಸಿ ವಾಣಿ ವಾಚಿಸಿದರು. ನಿಕಟಪೂರ್ವ ಅಧ್ಯಕ್ಷ ಕೆ. ಶ್ರೀಧರ ರಾವ್ ಅವರು ಅತಿಥಿಗಳನ್ನು ಪರಿಚಯಿಸಿದರು.

ಎಲ್ಲಾ ಮಕ್ಕಳಿಗೂ ಹಲ್ಲು ಉಜ್ಜುವ ಬ್ರಷ್, ಪೇಸ್ಟ್ ವಿತರಿಸಲಾಯಿತು. ಅತಿಥಿ ಹಾಗೂ ಕೇಂದ್ರಕ್ಕೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸಭೆಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ನಿಖಿತಾ, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಸುಜಾತ,
ಜೋಸೆಫ್ ಪಿರೇರಾ, ಸೌಜನ್ಯ, ಯಶೋಧ, ಭಾರತಿ, ದೇವಪ್ಪ ಪೂಜಾರಿ, ಜಯಚಂದ್ರ ಬಲ್ಕಜೆ, ಪಿ.ಟಿ. ಸೆಬಾಸ್ಟಿಯನ್, ಪೋಷಕರು ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಅಂಗನವಾಡಿ ಕೇಂದ್ರದ ಸಹಾಯಕಿ ಶ್ರೀಮತಿ ವಿಜಯಾ ವಂದಿಸಿದರು.

Related posts

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ. ಆಯ್ಕೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya
error: Content is protected !!