37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

ಧರ್ಮಸ್ಥಳ: ಕಾಲ ಬದಲಾಗಿದೆ. ಜೀವನಶೈಲಿ ಬದಲಾಗಿದೆ. ಆಹಾರ ಪದ್ಧತಿ ಬದಲಾಗಿದೆ. ಇವೆಲ್ಲದರ ಜೊತೆಗೆ ಮನುಷ್ಯನಲ್ಲಿ ಆರೋಗ್ಯ ಸಮಸ್ಯೆಗಳು ಸಹ ಹೆಚ್ಚಾಗುತ್ತಿವೆ. ಮನುಷ್ಯ ಊಟದಷ್ಟು ಔಷಧಿಗಳು ಔಷಧಿಯ ಪ್ರಮಾಣದಷ್ಟು ಊಟವನ್ನೂ ಮಾಡುವ ಪರಿಸ್ಥಿತಿಯಿದೆ. ಬದಲಾದ ಜೀವನಶೈಲಿಯಿಂದ ಉಂಟಾಗಿರುವ ಆರೋಗ್ಯ ತೊಂದರೆಗಳಿಗೆ ಪ್ರಕೃತಿ ಚಿಕಿತ್ಸೆ ಅತ್ಯುತ್ತಮ ಪರಿಹಾರವಾಗಿದೆ. ಪ್ರಕೃತಿ ಚಿಕಿತ್ಸೆ ನಮ್ಮ ಜೀವನಕ್ಕೆ ತುಂಬಾ ಹತ್ತಿರ ಇರುವ ಒಂದು ಚಿಕಿತ್ಸೆ. ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀಮತಿ ಡಾ.ಸುಜಾತರವರು ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಪಂಚ ಮಹಾಭೂತಗಳಾದ ಆಕಾಶ, ವಾಯು, ಅಗ್ನಿ, ನೀರು ಮತ್ತು ಭೂಮಿ ಇದರ ತತ್ವಗಳನ್ನು ಆಧಾರವಾಗಿಟ್ಟುಕೊಂಡು ನೀಡುವ ಚಿಕಿತ್ಸೆ ಪ್ರಕೃತಿ ಚಿಕಿತ್ಸೆ ಇದು ಅತ್ಯಂತ ಸುಲಭವಾಗಿ ಸಿಗುವ ಹಾಗೂ ನಾವು ಸುಲಭವಾಗಿ ಪಾಲನೆ ಮಾಡಲು ಸಹಕಾರಿಯಾಗುವ ಚಿಕಿತ್ಸೆ. ಉತ್ತಮ ಹಾಗೂ ಮಿತ ಆಹಾರ, ತಾಜಾ ಗಾಳಿ, ವ್ಯಾಯಾಮ, ಬಿಸಿಲು, ಧ್ಯಾನ ಮತ್ತು ಸರಿಯಾದ ಮಾನಸಿಕ ವರ್ತನೆ, ಇವೆಲ್ಲವೂ ದೇಹ ಮತ್ತು ಮನಸ್ಸನ್ನು ಸದೃಢವಾಗಿಡುವಲ್ಲಿ ತಮ್ಮ ಪಾತ್ರವನ್ನು ವಹಿಸುತ್ತವೆ ಎಂದು ಅವರು ತಿಳಿಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಪ್ರಾಂಶುಪಾಲರಾದ ವಿ ಪ್ರಕಾಶ್ ಕಾಮತ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು ಶ್ರೀ ಧ.ಮಂ.ಮಹಿಳಾ ಐಟಿಐನ ಬೋಧಕ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ಎಂ.ಡಿ ವಿದ್ಯಾರ್ಥಿನಿಯರಾದ ಡಾ. ಇಂದಿರಾ ಹಾಗೂ ಬಳಗ ಕಾರ್ಯಕ್ರಮ ಆಯೋಜಿಸಿದ್ದು ನಂತರ ಮಹಿಳಾ ಆರೋಗ್ಯದ ಕುರಿತು ಮಾಹಿತಿ ನೀಡಿದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಮದ್ದಡ್ಕದಲ್ಲಿ‌ ಸರಣಿ ಅಪಘಾತ; ಕಾರು ಜಖo

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!