23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

ಧರ್ಮಸ್ಥಳ: ಕಾಲ ಬದಲಾಗಿದೆ. ಜೀವನಶೈಲಿ ಬದಲಾಗಿದೆ. ಆಹಾರ ಪದ್ಧತಿ ಬದಲಾಗಿದೆ. ಇವೆಲ್ಲದರ ಜೊತೆಗೆ ಮನುಷ್ಯನಲ್ಲಿ ಆರೋಗ್ಯ ಸಮಸ್ಯೆಗಳು ಸಹ ಹೆಚ್ಚಾಗುತ್ತಿವೆ. ಮನುಷ್ಯ ಊಟದಷ್ಟು ಔಷಧಿಗಳು ಔಷಧಿಯ ಪ್ರಮಾಣದಷ್ಟು ಊಟವನ್ನೂ ಮಾಡುವ ಪರಿಸ್ಥಿತಿಯಿದೆ. ಬದಲಾದ ಜೀವನಶೈಲಿಯಿಂದ ಉಂಟಾಗಿರುವ ಆರೋಗ್ಯ ತೊಂದರೆಗಳಿಗೆ ಪ್ರಕೃತಿ ಚಿಕಿತ್ಸೆ ಅತ್ಯುತ್ತಮ ಪರಿಹಾರವಾಗಿದೆ. ಪ್ರಕೃತಿ ಚಿಕಿತ್ಸೆ ನಮ್ಮ ಜೀವನಕ್ಕೆ ತುಂಬಾ ಹತ್ತಿರ ಇರುವ ಒಂದು ಚಿಕಿತ್ಸೆ. ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀಮತಿ ಡಾ.ಸುಜಾತರವರು ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಪಂಚ ಮಹಾಭೂತಗಳಾದ ಆಕಾಶ, ವಾಯು, ಅಗ್ನಿ, ನೀರು ಮತ್ತು ಭೂಮಿ ಇದರ ತತ್ವಗಳನ್ನು ಆಧಾರವಾಗಿಟ್ಟುಕೊಂಡು ನೀಡುವ ಚಿಕಿತ್ಸೆ ಪ್ರಕೃತಿ ಚಿಕಿತ್ಸೆ ಇದು ಅತ್ಯಂತ ಸುಲಭವಾಗಿ ಸಿಗುವ ಹಾಗೂ ನಾವು ಸುಲಭವಾಗಿ ಪಾಲನೆ ಮಾಡಲು ಸಹಕಾರಿಯಾಗುವ ಚಿಕಿತ್ಸೆ. ಉತ್ತಮ ಹಾಗೂ ಮಿತ ಆಹಾರ, ತಾಜಾ ಗಾಳಿ, ವ್ಯಾಯಾಮ, ಬಿಸಿಲು, ಧ್ಯಾನ ಮತ್ತು ಸರಿಯಾದ ಮಾನಸಿಕ ವರ್ತನೆ, ಇವೆಲ್ಲವೂ ದೇಹ ಮತ್ತು ಮನಸ್ಸನ್ನು ಸದೃಢವಾಗಿಡುವಲ್ಲಿ ತಮ್ಮ ಪಾತ್ರವನ್ನು ವಹಿಸುತ್ತವೆ ಎಂದು ಅವರು ತಿಳಿಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಪ್ರಾಂಶುಪಾಲರಾದ ವಿ ಪ್ರಕಾಶ್ ಕಾಮತ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು ಶ್ರೀ ಧ.ಮಂ.ಮಹಿಳಾ ಐಟಿಐನ ಬೋಧಕ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ಎಂ.ಡಿ ವಿದ್ಯಾರ್ಥಿನಿಯರಾದ ಡಾ. ಇಂದಿರಾ ಹಾಗೂ ಬಳಗ ಕಾರ್ಯಕ್ರಮ ಆಯೋಜಿಸಿದ್ದು ನಂತರ ಮಹಿಳಾ ಆರೋಗ್ಯದ ಕುರಿತು ಮಾಹಿತಿ ನೀಡಿದರು.

Related posts

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

Suddi Udaya

ಜಿಲ್ಲಾ ಮಟ್ಟದ ಪ್ರಶಸ್ತಿ ಪತ್ರವನ್ನು ಜಿಲ್ಲಾಧಿಕಾರಿ ಡಾ ರವಿಕುಮಾರ್ ವಿತರಿಸಿದರು.

Suddi Udaya
error: Content is protected !!