23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

ಧರ್ಮಸ್ಥಳ: ಕಾಲ ಬದಲಾಗಿದೆ. ಜೀವನಶೈಲಿ ಬದಲಾಗಿದೆ. ಆಹಾರ ಪದ್ಧತಿ ಬದಲಾಗಿದೆ. ಇವೆಲ್ಲದರ ಜೊತೆಗೆ ಮನುಷ್ಯನಲ್ಲಿ ಆರೋಗ್ಯ ಸಮಸ್ಯೆಗಳು ಸಹ ಹೆಚ್ಚಾಗುತ್ತಿವೆ. ಮನುಷ್ಯ ಊಟದಷ್ಟು ಔಷಧಿಗಳು ಔಷಧಿಯ ಪ್ರಮಾಣದಷ್ಟು ಊಟವನ್ನೂ ಮಾಡುವ ಪರಿಸ್ಥಿತಿಯಿದೆ. ಬದಲಾದ ಜೀವನಶೈಲಿಯಿಂದ ಉಂಟಾಗಿರುವ ಆರೋಗ್ಯ ತೊಂದರೆಗಳಿಗೆ ಪ್ರಕೃತಿ ಚಿಕಿತ್ಸೆ ಅತ್ಯುತ್ತಮ ಪರಿಹಾರವಾಗಿದೆ. ಪ್ರಕೃತಿ ಚಿಕಿತ್ಸೆ ನಮ್ಮ ಜೀವನಕ್ಕೆ ತುಂಬಾ ಹತ್ತಿರ ಇರುವ ಒಂದು ಚಿಕಿತ್ಸೆ. ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀಮತಿ ಡಾ.ಸುಜಾತರವರು ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಪಂಚ ಮಹಾಭೂತಗಳಾದ ಆಕಾಶ, ವಾಯು, ಅಗ್ನಿ, ನೀರು ಮತ್ತು ಭೂಮಿ ಇದರ ತತ್ವಗಳನ್ನು ಆಧಾರವಾಗಿಟ್ಟುಕೊಂಡು ನೀಡುವ ಚಿಕಿತ್ಸೆ ಪ್ರಕೃತಿ ಚಿಕಿತ್ಸೆ ಇದು ಅತ್ಯಂತ ಸುಲಭವಾಗಿ ಸಿಗುವ ಹಾಗೂ ನಾವು ಸುಲಭವಾಗಿ ಪಾಲನೆ ಮಾಡಲು ಸಹಕಾರಿಯಾಗುವ ಚಿಕಿತ್ಸೆ. ಉತ್ತಮ ಹಾಗೂ ಮಿತ ಆಹಾರ, ತಾಜಾ ಗಾಳಿ, ವ್ಯಾಯಾಮ, ಬಿಸಿಲು, ಧ್ಯಾನ ಮತ್ತು ಸರಿಯಾದ ಮಾನಸಿಕ ವರ್ತನೆ, ಇವೆಲ್ಲವೂ ದೇಹ ಮತ್ತು ಮನಸ್ಸನ್ನು ಸದೃಢವಾಗಿಡುವಲ್ಲಿ ತಮ್ಮ ಪಾತ್ರವನ್ನು ವಹಿಸುತ್ತವೆ ಎಂದು ಅವರು ತಿಳಿಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಪ್ರಾಂಶುಪಾಲರಾದ ವಿ ಪ್ರಕಾಶ್ ಕಾಮತ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು ಶ್ರೀ ಧ.ಮಂ.ಮಹಿಳಾ ಐಟಿಐನ ಬೋಧಕ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ಎಂ.ಡಿ ವಿದ್ಯಾರ್ಥಿನಿಯರಾದ ಡಾ. ಇಂದಿರಾ ಹಾಗೂ ಬಳಗ ಕಾರ್ಯಕ್ರಮ ಆಯೋಜಿಸಿದ್ದು ನಂತರ ಮಹಿಳಾ ಆರೋಗ್ಯದ ಕುರಿತು ಮಾಹಿತಿ ನೀಡಿದರು.

Related posts

ಆ.5 ರಂದು ಮಂಗಳೂರು ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ಬಾಹ್ಯ ಬೆಂಬಲ

Suddi Udaya

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

Suddi Udaya

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ: ತುರ್ತು ಹಾಗೂ ಕಠಿಣ ಕಾನೂನು ಕ್ರಮಕ್ಕೆ ಗೃಹ ಸಚಿವರಲ್ಲಿ ಮನವಿ

Suddi Udaya

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya

ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿ ಶಮಾಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿ

Suddi Udaya
error: Content is protected !!