22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

ಧರ್ಮಸ್ಥಳ: ಕಾಲ ಬದಲಾಗಿದೆ. ಜೀವನಶೈಲಿ ಬದಲಾಗಿದೆ. ಆಹಾರ ಪದ್ಧತಿ ಬದಲಾಗಿದೆ. ಇವೆಲ್ಲದರ ಜೊತೆಗೆ ಮನುಷ್ಯನಲ್ಲಿ ಆರೋಗ್ಯ ಸಮಸ್ಯೆಗಳು ಸಹ ಹೆಚ್ಚಾಗುತ್ತಿವೆ. ಮನುಷ್ಯ ಊಟದಷ್ಟು ಔಷಧಿಗಳು ಔಷಧಿಯ ಪ್ರಮಾಣದಷ್ಟು ಊಟವನ್ನೂ ಮಾಡುವ ಪರಿಸ್ಥಿತಿಯಿದೆ. ಬದಲಾದ ಜೀವನಶೈಲಿಯಿಂದ ಉಂಟಾಗಿರುವ ಆರೋಗ್ಯ ತೊಂದರೆಗಳಿಗೆ ಪ್ರಕೃತಿ ಚಿಕಿತ್ಸೆ ಅತ್ಯುತ್ತಮ ಪರಿಹಾರವಾಗಿದೆ. ಪ್ರಕೃತಿ ಚಿಕಿತ್ಸೆ ನಮ್ಮ ಜೀವನಕ್ಕೆ ತುಂಬಾ ಹತ್ತಿರ ಇರುವ ಒಂದು ಚಿಕಿತ್ಸೆ. ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀಮತಿ ಡಾ.ಸುಜಾತರವರು ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಪಂಚ ಮಹಾಭೂತಗಳಾದ ಆಕಾಶ, ವಾಯು, ಅಗ್ನಿ, ನೀರು ಮತ್ತು ಭೂಮಿ ಇದರ ತತ್ವಗಳನ್ನು ಆಧಾರವಾಗಿಟ್ಟುಕೊಂಡು ನೀಡುವ ಚಿಕಿತ್ಸೆ ಪ್ರಕೃತಿ ಚಿಕಿತ್ಸೆ ಇದು ಅತ್ಯಂತ ಸುಲಭವಾಗಿ ಸಿಗುವ ಹಾಗೂ ನಾವು ಸುಲಭವಾಗಿ ಪಾಲನೆ ಮಾಡಲು ಸಹಕಾರಿಯಾಗುವ ಚಿಕಿತ್ಸೆ. ಉತ್ತಮ ಹಾಗೂ ಮಿತ ಆಹಾರ, ತಾಜಾ ಗಾಳಿ, ವ್ಯಾಯಾಮ, ಬಿಸಿಲು, ಧ್ಯಾನ ಮತ್ತು ಸರಿಯಾದ ಮಾನಸಿಕ ವರ್ತನೆ, ಇವೆಲ್ಲವೂ ದೇಹ ಮತ್ತು ಮನಸ್ಸನ್ನು ಸದೃಢವಾಗಿಡುವಲ್ಲಿ ತಮ್ಮ ಪಾತ್ರವನ್ನು ವಹಿಸುತ್ತವೆ ಎಂದು ಅವರು ತಿಳಿಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಪ್ರಾಂಶುಪಾಲರಾದ ವಿ ಪ್ರಕಾಶ್ ಕಾಮತ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು ಶ್ರೀ ಧ.ಮಂ.ಮಹಿಳಾ ಐಟಿಐನ ಬೋಧಕ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ಎಂ.ಡಿ ವಿದ್ಯಾರ್ಥಿನಿಯರಾದ ಡಾ. ಇಂದಿರಾ ಹಾಗೂ ಬಳಗ ಕಾರ್ಯಕ್ರಮ ಆಯೋಜಿಸಿದ್ದು ನಂತರ ಮಹಿಳಾ ಆರೋಗ್ಯದ ಕುರಿತು ಮಾಹಿತಿ ನೀಡಿದರು.

Related posts

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ-2026ರ ಸಮಾರೋಪ

Suddi Udaya

ವಾಣಿ ಪ.ಪೂ. ಕಾಲೇಜಿನ ರಿತ್ವಿಕ್ ಶೆಟ್ಟಿ ಏಕಪಾತ್ರ ಅಭಿನಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

Suddi Udaya
error: Content is protected !!