September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಮುಂಡಾಜೆ : ಮುಂಡಾಜೆ ನಿವಾಸಿ ಪ್ರಮೋದ್ ವಿ. ಭಿಡೆ ಎಂಬವರ ಮನೆಯಲ್ಲಿಟ್ಟಿದ್ದ ಚಿನ್ನಾಭರಣ ಕಳವು ಆದ ಬಗ್ಗೆ ಸೆ.12 ರಂದು ನೀಡದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮೋದ್ ವಿ ಬಿಢೆ ಜು.5 ರಂದು ಮನೆಯ ಸಾರಣೆ ಹಾಗೂ ಪೈಂಟಿಗ್‌ ಕೆಲಸವನ್ನು ಪ್ರಾರಂಭಿಸಿದ್ದು, ಕೆಲಸ ಪ್ರಾರಂಭ ಮಾಡುವ ಮುಂಚಿತವಾಗಿ ಜು 03 ರಂದು ಮನೆಯಲ್ಲಿದ್ದ ಚಿನ್ನಾಭರಣಗಳನ್ನು, ಅವರ ಪತ್ನಿ ಮನೆಯ ನೆಲಮಾಳಿಗೆಯಲ್ಲಿ ಇಟ್ಟಿದ್ದರು. ನೆಲಮಾಳಿಗೆಯಲ್ಲಿಟ್ಟಿದ್ದ ಚಿನ್ನಾಭರಣಗಳ ಕೋಣೆಗೆ ಬೀಗ ಹಾಕದೆ ಇದ್ದು, ಮನೆಯ ಕೆಲಸಕ್ಕೆ ಸುಮಾರು 10 ರಿಂದ 13 ಜನ ಕೆಲಸಕ್ಕೆಂದು ಬಂದಿರುತ್ತಾರೆ. ಕೆಲಸ ಮುಗಿಸಿ ಜುಲೈ 19 ರಂದು ತೆರಳಿರುತ್ತಾರೆ. ಸೆ. 12 ರಂದು ಬೆಳಗ್ಗೆ ಪ್ರಮೋದ್ ಬಿಢೆ ಹಾಗೂ ಅವರ ಪತ್ನಿ ಕಾರ್ಯಕ್ರಮಕ್ಕಾಗಿ ಆಭರಣ ಧರಿಸಿಕೊಳ್ಳಲು ಆಭರಣ ಇಟ್ಟಿದ್ದ ಸ್ಥಳಕ್ಕೆ ಹೋಗಿ ನೋಡಿದಾಗ, ಅಲ್ಲಿ ಇಡಲಾಗಿದ್ದ ಒಟ್ಟು 122 ಗ್ರಾಂ ಚಿನ್ನಾಭರಣಗಳು ಕಳವಾಗಿರುವುದು ಕಂಡು ಬಂದಿದ್ದು, ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 5 ಲಕ್ಷ ರೂಪಾಯಿಯಾಗಿರುತ್ತದೆ ಎಂಬುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 65/2023 ಕಲಂ: 380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಡ: ಸ್ಟಾರ್ ಲೈನ್ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಾರತೀಯ ಸೈನ್ಯದ ಅಭ್ಯುದಯಕ್ಕಾಗಿ ಸೀಯಾಳಭಿಷೇಕದ ಮೂಲಕ ವಿಶೇಷ ಪ್ರಾರ್ಥನೆ

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya

ಪ್ರವರ್ಗ-1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಚುನಾವಣೆ ಬಳಿಕ ಪ್ರತಿಭಟನೆ: ಅಶೋಕ್ ಕೊಂಚಾಡಿ

Suddi Udaya
error: Content is protected !!