September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹದ ಅಂಗವಾಗಿ ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಸೆ.14 ರಂದು ವೈಯಕ್ತಿಕ ಸ್ವಚ್ಛತೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಹತ್ಯಡ್ಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಇರುವ ಶಾಲೆತ್ತಡ್ಕ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ
ರೇಖಾ ಅವರು ಮಕ್ಕಳಿಗೆ ಹಲ್ಲು, ಬಾಯಿ ಹಾಗೂ ವೈಯಕ್ತಿಕ ಸ್ವಚ್ಛತೆ ಕುರಿತು ತರಬೇತಿ ನೀಡಿದರು.

ತರಬೇತಿ ವಿಭಾಗದ ಉಪಾಧ್ಯಕ್ಷ ವಿದ್ಯೇಂದ್ರ ಅವರು ಅಧ್ಯಕ್ಷತೆ ವಹಿಸಿದ್ದರು.

ಅಕ್ಷತ್ ರೈ ಜೇಸಿ ವಾಣಿ ವಾಚಿಸಿದರು. ನಿಕಟಪೂರ್ವ ಅಧ್ಯಕ್ಷ ಕೆ. ಶ್ರೀಧರ ರಾವ್ ಅವರು ಅತಿಥಿಗಳನ್ನು ಪರಿಚಯಿಸಿದರು.

ಎಲ್ಲಾ ಮಕ್ಕಳಿಗೂ ಹಲ್ಲು ಉಜ್ಜುವ ಬ್ರಷ್, ಪೇಸ್ಟ್ ವಿತರಿಸಲಾಯಿತು. ಅತಿಥಿ ಹಾಗೂ ಕೇಂದ್ರಕ್ಕೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸಭೆಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ನಿಖಿತಾ, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಸುಜಾತ,
ಜೋಸೆಫ್ ಪಿರೇರಾ, ಸೌಜನ್ಯ, ಯಶೋಧ, ಭಾರತಿ, ದೇವಪ್ಪ ಪೂಜಾರಿ, ಜಯಚಂದ್ರ ಬಲ್ಕಜೆ, ಪಿ.ಟಿ. ಸೆಬಾಸ್ಟಿಯನ್, ಪೋಷಕರು ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಅಂಗನವಾಡಿ ಕೇಂದ್ರದ ಸಹಾಯಕಿ ಶ್ರೀಮತಿ ವಿಜಯಾ ವಂದಿಸಿದರು.

Related posts

ಬಿ. ವೋಕ್ ಡಿಜಿಟಲ್ ಮೀಡಿಯಾ ಫಿಲ್ಮ್ ಮೇಕಿಂಗ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

Suddi Udaya

ಅಜ್ಜ–ಅಜ್ಜಿಯರೊಂದಿಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾರ್ಥಿಗಳ ಆತ್ಮೀಯ ಸಮಾಗಮ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ

Suddi Udaya

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!