23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

ಸುಲ್ಕೇರಿ: ಭಗವಾನ್ ಶ್ರೀ ನೇಮಿನಾಥ ಸ್ವಾಮಿಯ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಟಾ ಮಹೋತ್ಸವದ ದಿನಾಂಕ ಪ್ರಕಟ ಪಡಿಸುವ ಸಭೆ ಸೆ.15 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಡಿಸೆಂಬರ್ 29,30,31 ರಂದು ಧಾಮ ಸಂಪ್ರೋಕ್ಷಣಾ ಪೂರ್ವಕ ಭಗವಾನ್ ಶ್ರೀ ನೇಮಿನಾಥ ಸ್ವಾಮಿಯ ಪ್ರತಿಷ್ಠಾ ಮಹೋತ್ಸವ ನಡೆಸುವ ಬಗ್ಗೆ ದಿನಾಂಕ ಪ್ರಕಟ ಪಡಿಸಲಾಯಿತು.

ಸಭೆಯಲ್ಲಿ ಜಿ.ಎಸ್ ರಾಜೇಂದ್ರ ಕುಮಾರ್ ತುಮಕೂರು, ಶ್ರೀಮತಿ ಕಿರಣ್ ಪಾಟೀಲ್ ನಾಸಿಕ್, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಶ್ರೀಮತಿ ನವರತ್ನ ತುಮಕೂರು, ಬಸದಿಯ ಪುರೋಹಿತರಾದ ಹರ್ಷ ಇಂದ್ರರು ಉಪಸ್ಥಿತರಿದ್ದರು.

ಬಸದಿಯ ಆಡಳಿತ ಮೊಕ್ತೇಸರರಾದ ರವಿರಾಜ ಹೆಗ್ಡೆ ನಾವರಗುತ್ತು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭಬಸದಿಗೆ ಸಂಬಂಧಿಸಿದ ಹಾಗೂ ಸಮಸ್ತ ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದರು.ವಕೀಲರಾದ ಅಜಿತ್ ಎನ್ ನಾವರ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.ವಿಜಯ ಕುಮಾರ್ ಜೈನ್ ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ನಡೆದ ಮಂಗಳೂರು ವಿಭಾಗದ ಜಿನಭಜನಾ ಸ್ಪರ್ಧೆ: ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

Suddi Udaya
error: Content is protected !!