September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

ಮಚ್ಚಿನ: ಪುಂಜಾಲಕಟ್ಟೆ ವಲಯ ಮಟ್ಟದ 2023-24 ನೇ ಸಾಲಿನ ತ್ರೋಬಾಲ್ ಪಂದ್ಯಾಟವು ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವನ್ನು ಮಚ್ಚಿನ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿಯವರು ನೆರವೇರಿಸಿ, ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶ ದೊರೆಯಬೇಕು. ಆ ಮೂಲಕ ಅವರು ತಮ್ಮ ಪ್ರತಿಭೆಯನ್ನು ಪ್ರಕಟ ಪಡಿಸುವುದರ ಜೊತೆಗೆ ದೈಹಿಕ ಸದೃಢತೆಯನ್ನು ಪಡೆಯಲು ಅನುಕೂಲವಾಗುತ್ತದೆ ಎಂದರು.

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರೂಪ. ಡಿ ಇವರು ಕ್ರೀಡಾಕೂಟದಲ್ಲಿ ಸೋಲು ಗೆಲುವು ಸಹಜ. ಆದರೆ ವಿದ್ಯಾರ್ಥಿಗಳು ಗೆಲುವನ್ನು ಪಡೆದರೆ ಜೊತೆಗೆ ಸೋಲನ್ನು ಸಮಚಿತ್ತತೆಯಿಂದ ಸ್ವೀಕರಿಸುವ ಮನೋಭಾವ ಹೊಂದಿರಬೇಕು.

ಕ್ರೀಡೆ ಎಂಬುದು ಸಾಮಾಜಿಕ ಶಾಂತಿಗೆ ಪ್ರೇರಣೆಯಾಗಬೇಕು ಎಂದು ನುಡಿದರು. ಕಾರ್ಯಕ್ರಮದಲ್ಲಿ ತಾಲೂಕು ಅಕ್ಷರ ದಾಸೋಹದ ನೋಡಲ್ ಶ್ರೀಮತಿ ತಾರಕೇಶ್ವರಿ, ತಾಲೂಕು ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿ ಅಜಿತ್ ಕೊಕ್ರಾಡಿ, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಚೇತನ, ಶಾಲಾ ಎಸ್‌ಡಿಎಂಸಿ ಕಾರ್ಯಾಧ್ಯಕ್ಷರಾದ ಹೊನ್ನಪ್ಪ ಸಾಲಿಯಾನ್, ಎಸ್. ಡಿ. ಎಂ. ಸಿ ಶಿಕ್ಷಣ ತಜ್ಞರಾದ ಡಾ. ಮಾಧವ ಶೆಟ್ಟಿ ,ಶಾಲಾ ಮುಖ್ಯೋಪಾಧ್ಯಯರಾದ ಪ್ರಕಾಶ್. ಎಸ್. ನಾಯ್ಕ್ ಶಾಲಾ , ಕ್ರೀಡಾಕೂಟದ ವಲಯ ಸಂಘಟಕರಾದ ಸುಭಾಶ್ಚಂದ್ರ ಪಿ. ಪೂಜಾರಿ, ಎಸ್. ಡಿ .ಎಂ.ಸಿ ಸದಸ್ಯೆಯಾಗಿರುವ ಶ್ರೀಮತಿ ಭವ್ಯ, ಶ್ರೀಮತಿ ಕುಸುಮಾವತಿ ಹಾಗೂ ನಿಕಟಪೂರ್ವ ಕಾರ್ಯಾಧ್ಯಕ್ಷರಾದ ರುಕ್ಮಯ ಬಾಳಿಂಜ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ದೈಹಿಕ ಶಿಕ್ಷಕರಾದ ಸುಭಾಶ್ಚಂದ್ರ ಪಿ.ಪೂಜಾರಿಯವರು ಸ್ವಾಗತಿಸಿ, ಕನ್ನಡ ಶಿಕ್ಷಕರಾದ ಅವಿನಾಶ ಧನ್ಯವಾದವಿತ್ತರು. ಹಿಂದಿ ಭಾಷಾ ಶಿಕ್ಷಕ ವಿ. ಚಂದಪ್ಪ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Related posts

ಜ.14-23: ಸಾವಿರ ವರ್ಷಗಳ ಇತಿಹಾಸವಿರುವ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ-ಮಹಾರಥೋತ್ಸವ

Suddi Udaya

ಫ್ರೀಡಂ ಹಬ್ಬದಲ್ಲಿ ಪಂಚಮಿ ಮಾರೂರು ನೇತೃತ್ವದಲ್ಲಿ ಯಕ್ಷಗಾನ ಮತ್ತು ಭರತನಾಟ್ಯ ಪ್ರದರ್ಶನ

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಉತ್ಕೃಷ್ಟ ಶೈಕ್ಷಣಿಕ ಸಾಧನೆ,ಅಭಿನಂದಿಸಿದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ : ರಾಷ್ಟ್ರಮಟ್ಟದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳು

Suddi Udaya
error: Content is protected !!