September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಉಜಿರೆಯಲ್ಲಿ ಸೆ. 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕುಲಪತಿಯಾಗಿರುವ ಶ್ರೀಮತಿ ಡಾ. ಶಲೀಪ್ ಎ.ಪಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು ವಿದ್ಯಾರ್ಥಿನಿಯರಿಂದ ಸಂವಿಧಾನದ ಪೀಠಿಕೆಯನ್ನು ಓದಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು ನಂತರ ಆ ಪೀಠಿಕೆಯ ಅರ್ಥವನ್ನು ತಿಳಿಸಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಚರ್ಚೆ ನಡೆಸಿದರು. ಜಾತ್ಯತೀತ, ಸೆಕ್ಯುಲರಿಸಂ ಹಾಗೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎಲ್ಲರೂ ಇಲ್ಲಿ ಸಮಾನರು ಎಲ್ಲಾ ರೀತಿಯ ಸ್ವಾತಂತ್ರ್ಯ ನಮಗೆ ಇದೆ, ಎಲ್ಲರಿಗೂ ಸಮಾನ ಅವಕಾಶವಿದೆ ಭ್ರಾತೃತ್ವ ಸೌಹಾರ್ದತೆಯ ನೆಲೆಗಳಲ್ಲಿ ನಮ್ಮ ಸಂವಿಧಾನದಲ್ಲಿ ಕೆಲಸ ಕಾರ್ಯಗಳು ನಡೆಯುತ್ತವೆ. ಇವೆಲ್ಲವೂ ನಮಗೆ ನಾವೇ ನೀಡುತ್ತೇವೆ ಎಂದು ನವೆಂಬರ್ ತಿಂಗಳ 26 ರಂದು ಸಂವಿಧಾನದ ಪೀಠಿಕೆಯನ್ನು ಬರೆದಿರುತ್ತೇವೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಈ ರೀತಿಯ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜದಲ್ಲಿ ಶಾಂತಿ ನೆಮ್ಮದಿಯನ್ನು ನೀಡುತ್ತಾ ಬಂದಿದೆ ಎಂದು ಹೇಳಿ ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನಡೆದ ಪ್ರಭಂದ ಸ್ಪರ್ಧೆ ಹಾಗೂ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ ಪ್ರಕಾಶ್ ಕಾಮತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಫ್ಯಾಷನ್ ಡಿಸೈನ್ ಮತ್ತು ಟೆಕ್ನಾಲಜಿ ವಿದ್ಯಾರ್ಥಿನಿ ಕು. ಪವಿತ್ರ ಕಾರ್ಯಕ್ರಮ ನಿರೂಪಿಸಿದರು.

Related posts

ಕರಂಬಾರು ಬೋಟ್ಯಲ್ಮರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

Suddi Udaya
error: Content is protected !!