23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

ಸುಲ್ಕೇರಿ: ಭಗವಾನ್ ಶ್ರೀ ನೇಮಿನಾಥ ಸ್ವಾಮಿಯ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಟಾ ಮಹೋತ್ಸವದ ದಿನಾಂಕ ಪ್ರಕಟ ಪಡಿಸುವ ಸಭೆ ಸೆ.15 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಡಿಸೆಂಬರ್ 29,30,31 ರಂದು ಧಾಮ ಸಂಪ್ರೋಕ್ಷಣಾ ಪೂರ್ವಕ ಭಗವಾನ್ ಶ್ರೀ ನೇಮಿನಾಥ ಸ್ವಾಮಿಯ ಪ್ರತಿಷ್ಠಾ ಮಹೋತ್ಸವ ನಡೆಸುವ ಬಗ್ಗೆ ದಿನಾಂಕ ಪ್ರಕಟ ಪಡಿಸಲಾಯಿತು.

ಸಭೆಯಲ್ಲಿ ಜಿ.ಎಸ್ ರಾಜೇಂದ್ರ ಕುಮಾರ್ ತುಮಕೂರು, ಶ್ರೀಮತಿ ಕಿರಣ್ ಪಾಟೀಲ್ ನಾಸಿಕ್, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಶ್ರೀಮತಿ ನವರತ್ನ ತುಮಕೂರು, ಬಸದಿಯ ಪುರೋಹಿತರಾದ ಹರ್ಷ ಇಂದ್ರರು ಉಪಸ್ಥಿತರಿದ್ದರು.

ಬಸದಿಯ ಆಡಳಿತ ಮೊಕ್ತೇಸರರಾದ ರವಿರಾಜ ಹೆಗ್ಡೆ ನಾವರಗುತ್ತು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭಬಸದಿಗೆ ಸಂಬಂಧಿಸಿದ ಹಾಗೂ ಸಮಸ್ತ ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದರು.ವಕೀಲರಾದ ಅಜಿತ್ ಎನ್ ನಾವರ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.ವಿಜಯ ಕುಮಾರ್ ಜೈನ್ ವಂದಿಸಿದರು.

Related posts

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಅಕ್ರಮ ಕೋಳಿ ಅಂಕ- ಧರ್ಮಸ್ಥಳ ಪೊಲೀಸರ ದಾಳಿ: ಏಳು ಆರೋಪಿಗಳ ಬಂಧನ

Suddi Udaya

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya
error: Content is protected !!