September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

ಸುಲ್ಕೇರಿ: ಭಗವಾನ್ ಶ್ರೀ ನೇಮಿನಾಥ ಸ್ವಾಮಿಯ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಟಾ ಮಹೋತ್ಸವದ ದಿನಾಂಕ ಪ್ರಕಟ ಪಡಿಸುವ ಸಭೆ ಸೆ.15 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಡಿಸೆಂಬರ್ 29,30,31 ರಂದು ಧಾಮ ಸಂಪ್ರೋಕ್ಷಣಾ ಪೂರ್ವಕ ಭಗವಾನ್ ಶ್ರೀ ನೇಮಿನಾಥ ಸ್ವಾಮಿಯ ಪ್ರತಿಷ್ಠಾ ಮಹೋತ್ಸವ ನಡೆಸುವ ಬಗ್ಗೆ ದಿನಾಂಕ ಪ್ರಕಟ ಪಡಿಸಲಾಯಿತು.

ಸಭೆಯಲ್ಲಿ ಜಿ.ಎಸ್ ರಾಜೇಂದ್ರ ಕುಮಾರ್ ತುಮಕೂರು, ಶ್ರೀಮತಿ ಕಿರಣ್ ಪಾಟೀಲ್ ನಾಸಿಕ್, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಶ್ರೀಮತಿ ನವರತ್ನ ತುಮಕೂರು, ಬಸದಿಯ ಪುರೋಹಿತರಾದ ಹರ್ಷ ಇಂದ್ರರು ಉಪಸ್ಥಿತರಿದ್ದರು.

ಬಸದಿಯ ಆಡಳಿತ ಮೊಕ್ತೇಸರರಾದ ರವಿರಾಜ ಹೆಗ್ಡೆ ನಾವರಗುತ್ತು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭಬಸದಿಗೆ ಸಂಬಂಧಿಸಿದ ಹಾಗೂ ಸಮಸ್ತ ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದರು.ವಕೀಲರಾದ ಅಜಿತ್ ಎನ್ ನಾವರ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.ವಿಜಯ ಕುಮಾರ್ ಜೈನ್ ವಂದಿಸಿದರು.

Related posts

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶ್ರೀ ಧ.ಮ. ಆಂ.ಮಾ. ಶಾಲೆ ಧರ್ಮಸ್ಥಳದ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಪೂರ್ವ ಸಿದ್ಧತಾ ಪರೀಕ್ಷಾ ಶಿಬಿರ

Suddi Udaya

ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ: ರಕ್ಷಿತ್ ಶಿವರಾಂ

Suddi Udaya

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!