24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

ಮಚ್ಚಿನ: ಪುಂಜಾಲಕಟ್ಟೆ ವಲಯ ಮಟ್ಟದ 2023-24 ನೇ ಸಾಲಿನ ತ್ರೋಬಾಲ್ ಪಂದ್ಯಾಟವು ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವನ್ನು ಮಚ್ಚಿನ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿಯವರು ನೆರವೇರಿಸಿ, ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶ ದೊರೆಯಬೇಕು. ಆ ಮೂಲಕ ಅವರು ತಮ್ಮ ಪ್ರತಿಭೆಯನ್ನು ಪ್ರಕಟ ಪಡಿಸುವುದರ ಜೊತೆಗೆ ದೈಹಿಕ ಸದೃಢತೆಯನ್ನು ಪಡೆಯಲು ಅನುಕೂಲವಾಗುತ್ತದೆ ಎಂದರು.

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರೂಪ. ಡಿ ಇವರು ಕ್ರೀಡಾಕೂಟದಲ್ಲಿ ಸೋಲು ಗೆಲುವು ಸಹಜ. ಆದರೆ ವಿದ್ಯಾರ್ಥಿಗಳು ಗೆಲುವನ್ನು ಪಡೆದರೆ ಜೊತೆಗೆ ಸೋಲನ್ನು ಸಮಚಿತ್ತತೆಯಿಂದ ಸ್ವೀಕರಿಸುವ ಮನೋಭಾವ ಹೊಂದಿರಬೇಕು.

ಕ್ರೀಡೆ ಎಂಬುದು ಸಾಮಾಜಿಕ ಶಾಂತಿಗೆ ಪ್ರೇರಣೆಯಾಗಬೇಕು ಎಂದು ನುಡಿದರು. ಕಾರ್ಯಕ್ರಮದಲ್ಲಿ ತಾಲೂಕು ಅಕ್ಷರ ದಾಸೋಹದ ನೋಡಲ್ ಶ್ರೀಮತಿ ತಾರಕೇಶ್ವರಿ, ತಾಲೂಕು ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿ ಅಜಿತ್ ಕೊಕ್ರಾಡಿ, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಚೇತನ, ಶಾಲಾ ಎಸ್‌ಡಿಎಂಸಿ ಕಾರ್ಯಾಧ್ಯಕ್ಷರಾದ ಹೊನ್ನಪ್ಪ ಸಾಲಿಯಾನ್, ಎಸ್. ಡಿ. ಎಂ. ಸಿ ಶಿಕ್ಷಣ ತಜ್ಞರಾದ ಡಾ. ಮಾಧವ ಶೆಟ್ಟಿ ,ಶಾಲಾ ಮುಖ್ಯೋಪಾಧ್ಯಯರಾದ ಪ್ರಕಾಶ್. ಎಸ್. ನಾಯ್ಕ್ ಶಾಲಾ , ಕ್ರೀಡಾಕೂಟದ ವಲಯ ಸಂಘಟಕರಾದ ಸುಭಾಶ್ಚಂದ್ರ ಪಿ. ಪೂಜಾರಿ, ಎಸ್. ಡಿ .ಎಂ.ಸಿ ಸದಸ್ಯೆಯಾಗಿರುವ ಶ್ರೀಮತಿ ಭವ್ಯ, ಶ್ರೀಮತಿ ಕುಸುಮಾವತಿ ಹಾಗೂ ನಿಕಟಪೂರ್ವ ಕಾರ್ಯಾಧ್ಯಕ್ಷರಾದ ರುಕ್ಮಯ ಬಾಳಿಂಜ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ದೈಹಿಕ ಶಿಕ್ಷಕರಾದ ಸುಭಾಶ್ಚಂದ್ರ ಪಿ.ಪೂಜಾರಿಯವರು ಸ್ವಾಗತಿಸಿ, ಕನ್ನಡ ಶಿಕ್ಷಕರಾದ ಅವಿನಾಶ ಧನ್ಯವಾದವಿತ್ತರು. ಹಿಂದಿ ಭಾಷಾ ಶಿಕ್ಷಕ ವಿ. ಚಂದಪ್ಪ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Related posts

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!